ಕುಂದಾಪುರ: ಸುಮಾರು 2 ದಶಕಗಳ ಹಿಂದೆ ಮನೆ ತೊರೆದು, ನಕ್ಸಲ್ ಗುಂಪು ಸೇರಿಕೊಂಡಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆಯ ಲಕ್ಷ್ಮೀ ತೊಂಬಟ್ಟು ಶರಣಾಗಿರುವುದು ಕುಟುಂಬದವರಲ್ಲಿ ಸಂತಸ ಮೂಡಿಸಿದೆ.
7ನೇ ತರಗತಿಯವರೆಗೆ ಓದಿದ್ದ ಲಕ್ಷ್ಮೀ ಸಂಡೂರು ನೀರಾವರಿ ಪ್ರಾಜೆಕ್ಟ್ ಕೆಲಸಕ್ಕೆ ಹೋಗುತ್ತಿದ್ದರು. 2006ರಲ್ಲಿ ಒಂದು ದಿನ ಸ್ನೇಹಿತರ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಬಂದಿರಲಿಲ್ಲ. ನಾವು 3-4 ಹುಡುಕಾಟ ನಡೆಸಿದರೂ ಸಿಗಲಿಲ್ಲ. ಆ ಬಳಿಕ ಆಕೆ ನಕ್ಸಲ್ ಗುಂಪಿಗೆ ಸೇರಿದ್ದಾಳೆಂದು ತಿಳಿಯಿತು. ಆಮೇಲೆ ಶಂಕರನಾರಾಯಣ ಠಾಣೆಗೆ ತಿಳಿಸಿದೆವು ಎಂದು ಅಣ್ಣ ವಿಠಲ ಪೂಜಾರಿ ಹಳೆಯ ನೆನಪುಗಳನ್ನು ಸ್ಮರಿಸಿಕೊಂಡರು.
ಮನೆ ಬಿಟ್ಟು ಹೋಗುವಾಗ ಈಕೆಗೆ 17-18 ವರ್ಷ ಆಗಿರಬಹುದು. ಈ ಹಿಂದೆ ಈಕೆ ಊರಿಗೆ ಬಂದಿರುವುದಾಗಿ ಕೆಲವರು ಹೇಳುತ್ತಾರೆ. ಆದರೆ ನಾವು 2006ರ ಬಳಿಕ ಆಕೆಯನ್ನು ನೋಡುತ್ತಿರುವುದು ಇವತ್ತೇ. ಆಕೆಯನ್ನು ನೋಡಿ ನಮಗೆಲ್ಲ ತುಂಬಾ ಖುಷಿಯಾಯಿತು. ಈಕೆಯ ಕಾರಣಕ್ಕೆ ಆರಂಭದ ದಿನಗಳಲ್ಲಿ ನಾವು ತುಂಬಾ ತೊಂದರೆ ಅನುಭವಿಸಿದ್ದೆವು. ಇನ್ನು ಆಕೆ ನಿಶ್ಚಿಂತೆಯಿಂದ ಮನೆಗೆ ಬರಬಹುದು. ಮನೆಯಲ್ಲಿ ಇರಬಹುದು ಎನ್ನುತ್ತಾರೆ ವಿಠಲ ಪೂಜಾರಿ.
ಮನೆಯಲ್ಲಿದ್ದ ಬಡತನ ಆಕೆ ನಕ್ಸಲ್ ಸೇರಲು ಕಾರಣ ಇರಬಹುದು. ಆಕೆ ನಕ್ಸಲ್ ಸೇರಿದ ಬಳಿಕ ನಾವು ಅರಣ್ಯ ಇಲಾಖೆ ಹಾಗೂ ಪೊಲೀಸರಿಂದ ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದ್ದೆವು. ನಮ್ಮ ಮದುವೆ, ಹೆತ್ತವರ ಸಾವಿನ ಸಂದರ್ಭದಲ್ಲೂ ಆಕೆ ಬರಬಹುದು ಎಂದು ಪೊಲೀಸರು ಕಾದಿದ್ದರು ಎಂದು ಅವರು ಹೇಳಿದರು.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…