ಕುಂದಾಪುರ: ಸುಮಾರು 2 ದಶಕಗಳ ಹಿಂದೆ ಮನೆ ತೊರೆದು, ನಕ್ಸಲ್ ಗುಂಪು ಸೇರಿಕೊಂಡಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆಯ ಲಕ್ಷ್ಮೀ ತೊಂಬಟ್ಟು ಶರಣಾಗಿರುವುದು ಕುಟುಂಬದವರಲ್ಲಿ ಸಂತಸ ಮೂಡಿಸಿದೆ.
7ನೇ ತರಗತಿಯವರೆಗೆ ಓದಿದ್ದ ಲಕ್ಷ್ಮೀ ಸಂಡೂರು ನೀರಾವರಿ ಪ್ರಾಜೆಕ್ಟ್ ಕೆಲಸಕ್ಕೆ ಹೋಗುತ್ತಿದ್ದರು. 2006ರಲ್ಲಿ ಒಂದು ದಿನ ಸ್ನೇಹಿತರ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಬಂದಿರಲಿಲ್ಲ. ನಾವು 3-4 ಹುಡುಕಾಟ ನಡೆಸಿದರೂ ಸಿಗಲಿಲ್ಲ. ಆ ಬಳಿಕ ಆಕೆ ನಕ್ಸಲ್ ಗುಂಪಿಗೆ ಸೇರಿದ್ದಾಳೆಂದು ತಿಳಿಯಿತು. ಆಮೇಲೆ ಶಂಕರನಾರಾಯಣ ಠಾಣೆಗೆ ತಿಳಿಸಿದೆವು ಎಂದು ಅಣ್ಣ ವಿಠಲ ಪೂಜಾರಿ ಹಳೆಯ ನೆನಪುಗಳನ್ನು ಸ್ಮರಿಸಿಕೊಂಡರು.
ಮನೆ ಬಿಟ್ಟು ಹೋಗುವಾಗ ಈಕೆಗೆ 17-18 ವರ್ಷ ಆಗಿರಬಹುದು. ಈ ಹಿಂದೆ ಈಕೆ ಊರಿಗೆ ಬಂದಿರುವುದಾಗಿ ಕೆಲವರು ಹೇಳುತ್ತಾರೆ. ಆದರೆ ನಾವು 2006ರ ಬಳಿಕ ಆಕೆಯನ್ನು ನೋಡುತ್ತಿರುವುದು ಇವತ್ತೇ. ಆಕೆಯನ್ನು ನೋಡಿ ನಮಗೆಲ್ಲ ತುಂಬಾ ಖುಷಿಯಾಯಿತು. ಈಕೆಯ ಕಾರಣಕ್ಕೆ ಆರಂಭದ ದಿನಗಳಲ್ಲಿ ನಾವು ತುಂಬಾ ತೊಂದರೆ ಅನುಭವಿಸಿದ್ದೆವು. ಇನ್ನು ಆಕೆ ನಿಶ್ಚಿಂತೆಯಿಂದ ಮನೆಗೆ ಬರಬಹುದು. ಮನೆಯಲ್ಲಿ ಇರಬಹುದು ಎನ್ನುತ್ತಾರೆ ವಿಠಲ ಪೂಜಾರಿ.
ಮನೆಯಲ್ಲಿದ್ದ ಬಡತನ ಆಕೆ ನಕ್ಸಲ್ ಸೇರಲು ಕಾರಣ ಇರಬಹುದು. ಆಕೆ ನಕ್ಸಲ್ ಸೇರಿದ ಬಳಿಕ ನಾವು ಅರಣ್ಯ ಇಲಾಖೆ ಹಾಗೂ ಪೊಲೀಸರಿಂದ ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದ್ದೆವು. ನಮ್ಮ ಮದುವೆ, ಹೆತ್ತವರ ಸಾವಿನ ಸಂದರ್ಭದಲ್ಲೂ ಆಕೆ ಬರಬಹುದು ಎಂದು ಪೊಲೀಸರು ಕಾದಿದ್ದರು ಎಂದು ಅವರು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…