ಕುಂದಾಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ನ ಕೊಡುಗೆ ಅಪಾರ. ನಮ್ಮದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಗಾಂಧೀಜಿಯವರ ಪೀಳಿಗೆ. ಆದರೆ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದ ಹಿನ್ನೆಲೆಯವರು ಮತ್ತು ಮಹಾತ್ಮ ಗಾಂಧೀಜಿಯವರನ್ನು ಗುಂಡಿಟ್ಟು ಕೊಂದ ಗೋಡ್ಸೆ ತತ್ವ ಮೆಚ್ಚುವ ಪಕ್ಷದವರು ಸ್ವಾತಂತ್ರ್ಯೋತ್ಸವದ ಕುರಿತಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ ಎಷ್ಟು ಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರಶ್ನಿಸಿದರು.
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೇರಳಕಟ್ಟೆಯಿಂದ ತಲ್ಲೂರುವರೆಗೆ ಬುಧವಾರ ನಡೆದ ಪಾದಯಾತ್ರೆಯ ಬಳಿಕ ತಲ್ಲೂರಿನ ಮೂರ್ತೆದಾರರ ಸಭಾ ಭವನದಲ್ಲಿ ನಡೆದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಸ್ವಾತಂತ್ರ್ಯದ 75ನೇ ಅಮೃತಮಹೋತ್ಸವದ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಇತಿಹಾಸವನ್ನು ನೆನಪಿಸಿಕೊಳ್ಳುವ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ಸ್ಮರಣೆ ಕೂಡ ಮಾಡಬೇಕು. ನೇರವಾಗಿ ಜನರನ್ನು ತಲುಪಲು ಪಾದಯಾತ್ರೆಯಿಂದ ಮಾತ್ರ ಸಾಧ್ಯ ಎಂಬುವುದನ್ನು ಮಹಾತ್ಮ ಗಾಂಧೀಜಿಯವರು ತೋರಿಸಿಕೊಟ್ಟಿದ್ದು, ಅವರ ತತ್ವದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದಕ್ಕಾಗಿ ಈ ಪಾದಯಾತ್ರೆ ನಡೆಸುತ್ತಿದ್ದೇವೆ. ಪ್ರತಿಯೊಬ್ಬರೂ ವಿವಿಧತೆಯಲ್ಲಿ ಏಕತೆಯ ನಡುವೆ ಎಲ್ಲರೂ ಸಮಾನರು ಎಂಬುದನ್ನು ಮನಗಾಣಬೇಕು. ದ್ವೇಷದ ಮನೋಭಾವನೆ ಬಿಟ್ಟು ಪ್ರೀತಿಯ ಮನೋಭಾವನೆಯೊಂದಿಗೆ ಸಮಾಜದೊಳಗಿನ ಕಂದಕ ಸರಿಪಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಪ್ರವೀಣ್ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ – Vishwanews24
ದೇಶದಲ್ಲಿ ವಿವಿಧ ಧರ್ಮ, ಜಾತಿ, ಭಾಷೆಗಳಿದ್ದರೂ ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯದಂತೆ ಇವುಗಳ ನಡುವಿನ ಗೋಡೆ ಒಡೆದು ಸಾಮಾಜಿಕ ನ್ಯಾಯದ ಕಡೆಗೆ ಮುಖಮಾಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕ್ರಾಂತಿಕಾರಿ ಹೆಜ್ಜೆಯಿಟ್ಟಿದ್ದು ಬದುಕು ಕಟ್ಟಿಕೊಡುವ ಕಾರ್ಯಕ್ರಮ ರೂಪಿಸಿದೆ. ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿರಿಸಿಕೊಂಡು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ.
ಬೃಹತ್ ಪಾದಯಾತ್ರೆ:
ನೇರಳಕಟ್ಟೆ-ಕರ್ಕುಂಜೆ ಮೂಲಕ ಮಾವಿನಕಟ್ಟೆ, ಕರ್ಕಿ, ಹಟ್ಟಿಯಂಗಡಿ ಮಾರ್ಗವಾಗಿ ತಲ್ಲೂರಿನತ್ತ ಪಾದಯಾತ್ರೆ ಸಾಗಿಬಂದಿದ್ದು ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಪಾಲ್ಗೊಂಡರು. ಕಾಲುನೋವಿನಲ್ಲೂ ಕೂಡ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಕಾರ್ಯಕರ್ತರು ಗೋಪಾಲ ಪೂಜಾರಿಯವರಿಗೆ ಜೈಕಾರ ಹಾಕಿ ಹುರಿದುಂಬಿಸಿದರು. ತಲ್ಲೂರು ಪೇಟೆಯಲ್ಲಿ ಪಾದಯಾತ್ರೆ ಸಮಾಪನಗೊಂಡ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲೆಯ 10 ಬ್ಲಾಕ್ಗಳಲ್ಲಿ ನಡೆದ ಪಾದಯಾತ್ರೆಯ ಸಮಾರೋಪ ತಲ್ಲೂರಿನಲ್ಲಿ ಸಮಾಪ್ತಿಗೊಂಡಿತು. 10 ಬ್ಲಾಕ್ ಗೆ ಹೋಲಿಸಿದರೆ ವಂಡ್ಸೆ ಬ್ಲಾಕ್ ವ್ಯಾಪ್ತಿಯಲ್ಲಿ ನಡೆದ ಪಾದಯಾತ್ರೆಯಲ್ಲಿ ಬಹಳಷ್ಟು ಜನರು ಪಾಲ್ಗೊಂಡಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…