ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.
ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ
ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು.
ನಮೇಶ್ ಗಾಗಿ ತೀವ್ರ ಹುಡುಕಾಟ:
ನಮೇಶ್ ರಾತ್ರಿಯಾದರೂ ಮನೆಗೆ ಬಾರದಿದ್ದುದನ್ನು ಗಮಿಸಿದ ಮನೆಯವರು ಕುಂದಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಪತ್ತೆಯಾಗದ ಕಾರಣ ಶುಕ್ರವಾರವೂ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು.
ಶನಿವಾರ ಬೆಳಿಗ್ಗೆ ನಮೇಶ್ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ಏನೆಂಬುವುದು ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…