ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.
ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ
ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು.
ನಮೇಶ್ ಗಾಗಿ ತೀವ್ರ ಹುಡುಕಾಟ:
ನಮೇಶ್ ರಾತ್ರಿಯಾದರೂ ಮನೆಗೆ ಬಾರದಿದ್ದುದನ್ನು ಗಮಿಸಿದ ಮನೆಯವರು ಕುಂದಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಪತ್ತೆಯಾಗದ ಕಾರಣ ಶುಕ್ರವಾರವೂ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು.
ಶನಿವಾರ ಬೆಳಿಗ್ಗೆ ನಮೇಶ್ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ಏನೆಂಬುವುದು ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…