ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.
ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ
ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು.
ನಮೇಶ್ ಗಾಗಿ ತೀವ್ರ ಹುಡುಕಾಟ:
ನಮೇಶ್ ರಾತ್ರಿಯಾದರೂ ಮನೆಗೆ ಬಾರದಿದ್ದುದನ್ನು ಗಮಿಸಿದ ಮನೆಯವರು ಕುಂದಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಪತ್ತೆಯಾಗದ ಕಾರಣ ಶುಕ್ರವಾರವೂ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು.
ಶನಿವಾರ ಬೆಳಿಗ್ಗೆ ನಮೇಶ್ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ಏನೆಂಬುವುದು ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…