ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗೂ ಮೀರಿ ಕಡಿಮೆ ಅಂಕ ಬಂತೆಂಬ ಕಾರಣಕ್ಕೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಕಾಲೇಜು ಸಮೀಪದ ಅರಬ್ಬೀ ಸಮುದ್ರದಲ್ಲಿ ಪತ್ತೆಯಾಗಿದೆ.
ಹೆಬ್ರಿಯ ನವೋದಯದಲ್ಲಿ ಹತ್ತನೇ ತರಗತಿ ಓದಿದ್ದ ಸಾಯೀಶ್ ಶೆಟ್ಟಿ, ಶಿವಮೊಗ್ಗದಲ್ಲಿ ದ್ವಿತೀಯ ಪಿಯು ಮಾಡುತ್ತಿದ್ದ. ಯಾವುದೇ ಕೋಚಿಂಗ್ ಇಲ್ಲದೇ ನೀಟ್ ಪರೀಕ್ಷೆ ಬರೆದಿದ್ದ. ಮೆಡಿಕಲ್ ಓದಬೇಕು ಎನ್ನುವ ಹಠ ಮನಸ್ಸಿನಲ್ಲಿತ್ತು.
ರಘುವೀರ್ ಶೆಟ್ಟಿಯ ಒಬ್ಬನೇ ಗಂಡುಮಗ ಸಾಯೀಶ್ ಮನನೊಂದು ನಿನ್ನೆ ಹೇರಿಕುದ್ರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ನಿನ್ನೆಯಿಡೀ ಸಾಯೀಶ್ ಗಾಗಿ ಶೋಧ ನಡೆದಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಟರಿ ಸಮುದಾಯ ದಳ ಪಾದೂರು ಇದರ ನೂತನ ಪ್ರತಿನಿಧಿಯಾಗಿ ಯುವ ಉದ್ಯಮಿ ಪ್ರಸಾದ್ ಆಚಾರ್ಯ ಆಯ್ಕೆ – Vishwanews24
ಸೇತುವೆ ಮೇಲಿಂದ ಯುವಕನೊರ್ವ ನದಿಗೆ ಹಾರುತ್ತಿರುವುದನ್ನು ಗಮನಿಸಿದ ವಾಹನ ಸವಾರರು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರ ಸಹಾಯದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಯ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ನದಿ ನೀರಿನ ಹರಿವು ಹೆಚ್ಚಿದ್ದು, ನೀರಿನ ಮಟ್ಟ ಜಾಸ್ತಿ ಇರುವುದರಿಂದ ಹಾಗೂ ಮಳೆ ಸುರಿಯುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ತೊಡಕಾಗಿದ್ದು, ಶುಕ್ರವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ಮತ್ತೆ ಮುಂದುವರೆಸಲಾಗಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…