Featured

ಕುಂದಾಪುರ : ನೀವು ಬ್ಯಾನ್ ಮಾಡುತ್ತಿರುವುದು ನನ್ನನ್ನಲ್ಲ, ಹಿಂದುತ್ವವನ್ನು ಹಿಂದೂ ಸಿದ್ದಾಂತವನ್ನು : ಬಿಜೆಪಿ ವಿರುದ್ಧ ಮುತಾಲಿಕ್ – Vishwanews24

ನನ್ನ ಕಾರ್ಯಕ್ರಮಕ್ಕೆ ಬಿಜೆಪಿಯವರೇ ಅಡ್ಡಿಪಡಿಸುತ್ತಿದ್ದಾರೆ ..

ನೀವು ಬ್ಯಾನ್ ಮಾಡುತ್ತಿರುವುದು ನನ್ನನ್ನಲ್ಲ, ಹಿಂದುತ್ವವನ್ನು ಹಿಂದೂ ಸಿದ್ದಾಂತವನ್ನು..

ಹಿಂದೂಗಳಿಂದಲೇ ಗೆದ್ದು ಬಂದವರು ನೀವು ಹಿಂದೂಗಳನ್ನೇ ನೀವು ತಡೆಯುತ್ತೀರಿ ಅಂದರೆ ಮುಂದಿನ ದಿನ ನಿಮಗೆ ಪಾಠ ಕಲಿಸಬೇಕಾಗುತ್ತೆ..

ಅಕ್ಷಯ ತೃತೀಯದಂದು ಹಿಂದೂಗಳ ಅಂಗಡಿಯಲ್ಲೇ ಖರೀದಿ ಮಾಡಿದರೆ ಸಂಸ್ಕೃತಿ ಉಳಿಯುತ್ತೆ..

ಕುಂದಾಪುರ: ರಾಜ್ಯ ಸರಕಾರದ ವಿರುದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನಾನಂತೂ 67 ವರ್ಷದಿಂದ ಹಿಂದೂ ಸಂಘಟನೆಗಳಲ್ಲಿ ಹೋರಾಟ ಮಾಡುತ್ತಿದ್ದೇನೆ. ನಮ್ಮ ಎಲ್ಲಾ ಹೋರಾಟದ ಲಾಭ ಬಿಜೆಪಿಗೆ ಹೋಗುತ್ತಿದೆ. ಆದರೆ ಬಿಜೆಪಿಯವರು ಸ್ಪಂದಿಸುತ್ತಿಲ್ಲ. ನನ್ನ ಕಾರ್ಯಕ್ರಮಕ್ಕೆ ಬಿಜೆಪಿಯವರೇ ಅಡ್ಡಿಪಡಿಸುತ್ತಿದ್ದಾರೆ’ ಎಂದು ಗುಡುಗಿದ್ದಾರೆ.

ಕುಂದಾಪುರದಲ್ಲಿ ಮಾತನಾಡಿದ ಅವರು, ಕೋಲಾರ, ಉಡುಪಿ, ಕಲಬುರ್ಗಿ ಜಿಲ್ಲೆಗೆ ನನಗೆ ಬ್ಯಾನ್ ಮಾಡಿದರು. ಕಾಂಗ್ರೆಸ್ ಇದ್ದಾಗಲೂ ಬ್ಯಾನ್, ಜೈಲು, ಬಿಜೆಪಿ ಇದ್ದಾಗಲೂ ಬ್ಯಾನ್, ಕೇಸು ಜೈಲು, ಬಿಜೆಪಿ ನನ್ನನ್ನು ಬ್ಯಾನ್ ಮಾಡುತ್ತದೆ ಅಂದ್ರೆ ಹೇಗೆ? ನೀವು ಬ್ಯಾನ್ ಮಾಡುತ್ತಿರುವುದು ನನ್ನನ್ನಲ್ಲ, ಹಿಂದುತ್ವವನ್ನು ಹಿಂದೂ ಸಿದ್ದಾಂತವನ್ನು ಬ್ಯಾನ್ ಮಾಡುತ್ತಿದ್ದೀರಿ.
ಹಿಂದೂಗಳಿಂದಲೇ ಗೆದ್ದು ಬಂದವರು ನೀವು ಹಿಂದೂಗಳನ್ನೇ ನೀವು ತಡೆಯುತ್ತೀರಿ ಅಂದರೆ ಮುಂದಿನ ದಿನ ನಿಮಗೆ ಪಾಠ ಕಲಿಸಬೇಕಾಗುತ್ತೆ. ದೇಶದ ಹಿತಕ್ಕಾಗೆ ಹಿಂದೂ ಸಂಘಟಕರು ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜನರಿಗೆ, ದೇಶಕ್ಕೆ ಯಾವುದು ಹಿತ, ಯಾವುದು ಮಾರಕ ಎನ್ನುವುದು ಗೊತ್ತಾಗಿದೆ. ಹಿಂದೂ ಸಂಘಟನೆಗಳಿಂದ ಸಮಾಜ ಜಾಗೃತಿ ಯಾಗಿದೆ. ಸಮಾಜಕೊಂದು ಕಲ್ಪನೆ, ದೃಷ್ಟಿಕೋನ ಸಿಕ್ಕಿದೆ. ಅಕ್ಷಯ ತೃತೀಯದಂದು ಹಿಂದೂಗಳ ಅಂಗಡಿಯಲ್ಲೇ ಖರೀದಿ ಮಾಡಿ ಎಂದು ಪುನರುಚ್ಚರಿಸಿದ್ದಾರೆ.
ಅಕ್ಷಯ ತೃತೀಯ ಹಿಂದುಗಳ ಹಬ್ಬ. ಹಿಂದೂಗಳ ಹಬ್ಬದಂದು ಹಿಂದೂಗಳ ಅಂಗಡಿಯಲ್ಲೇ ಖರೀದಿ ಮಾಡಿದರೆ ಸಂಸ್ಕೃತಿ ಉಳಿಯುತ್ತೆ. ಹಿಂದೂಸ್ತಾನದ ಸುರಕ್ಷತೆಗೆ ಇದು ಅಗತ್ಯ. ಜನರು ಕೂಡ ಇದಕ್ಕೆ ಸ್ಪಂದಿಸುತ್ತಿದ್ದಾರೆ. ಹಲಾಲ್ ಬಗ್ಗೆ ಆಗಿರುವ ಜಾಗೃತಿಯನ್ನು ನಾವು ನೋಡಿದ್ದೇವೆ. ಮುಂದಿನ ದಿನ ಹಲಾಲ್ ಕಟ್ ಮಾಂಸವನ್ನು ಹಿಂದೂಗಳು ಖರೀದಿ ಮಾಡುವುದಿಲ್ಲ.
ಇದೇ ಮಾದರಿಯ ಹೋರಾಟ ಈ ವಿಚಾರದಲ್ಲೂ ನಡೆಯಲಿದೆ. ಕೇರಳ ಮೂಲದ ಜ್ಯುವೆಲ್ಲರಿ ಕಂಪೆನಿಗಳು ಹಿಂಸೆಗೆ ಹಣಕಾಸು ನೆರವು ನೀಡುತ್ತಿವೆ ಎಂದು ಹೇಳಿದ್ದಾರೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

14 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

17 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

17 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

19 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

20 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

22 hours ago