Featured

ಕುಂದಾಪುರ: ಪತ್ನಿ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಪತಿ -Vishwanews24

ಕುಂದಾಪುರ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿ ನೇಣು ಹಾಕಿಕೊಂಡ ಘಟನೆ ಕುಂದಾಪುರ ಗೋಳಿಯಂಗಡಿ ಸಮೀದ ಬೆಳ್ವೆ ಗ್ರಾಮದ ಸೆಟ್ ವಳ್ಳಿ ಎಂಬಲ್ಲಿ ಬುಧವಾರ ನಡೆದಿದ್ದು ರಾತ್ರಿ ವೇಳೆ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸೂರ್ಯನಾರಾಯಣ ಭಟ್ (50) ಎಂಬಾತ ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಪತ್ನಿ ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂಬುವರೇ ಹತ್ಯೆಯಾದವರು.

ಕೃಷಿಕರಾಗಿದ್ದ ಸೂರ್ಯನಾರಾಯಣ ಭಟ್ ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಬುಧವಾರ ಸಂಜೆ ಅಡುಗೆ ಕೆಲಸಕ್ಕೆ ಹೋಗುವುದಾಗಿ ಒಪ್ಪಿಕೊಂಡಿದ್ದರು. ಆದರೆ ಹೋಗದೇ ಇದ್ದಾಗ ಅಡುಗೆಯವರು ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಪ್ ಬಂದಿದ್ದು, ಪತ್ನಿಯ ಫೊನ್ ಸ್ವಿಚ್ ಆಪ್ ಆಗಿತ್ತು ಬಳಿಕ ಅವರ ಅಣ್ಣನಿಗೆ ಕರೆ ಮಾಡಿದ್ದು ಸಹೋದರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬುಧವಾರ ನಸುಕಿನಲ್ಲಿಯೇ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಶಂಕಿಸಲಾಗಿದ್ದು ತಲೆಯಲ್ಲಿ ಚುಚ್ಚಿ ಗಾಯಗಳಿವೆ. ಬಳಿಕ ಈತ ಮನೆಯೊಳಗೆ ಚಿಕ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗ ಸುಧೀಂದ್ರ ಹೆಬ್ರಿಯ ಎಸ್ ಆರ್ ಎಸ್ ಶಾಲೆಯಲ್ಲಿ ಎಂಟನೇ ತರಗತಿ ಹಾಗೂ ಸುಧೀಶ್ ಅದೇ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ.ಇವರ ಸಹೋದರ ಒಬ್ಬ ಬೆಂಗಳೂರಿನಲ್ಲಿದ್ದು, ಮತ್ತೊಬ್ಬ ಊರಿನಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದಾರೆ. ಸಹೋದರಿ ಶಿಕ್ಷಕಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲದ ವಿಧಿ ವಿಜ್ಞಾನ ತಜ್ಞರು, ಶ್ವಾನ ದಳ, ಬೆರಳಚ್ಚು ತಜ್ಞರು ಪರೀಕ್ಷಿಸಿದ ಬಳಿಕ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮೃತದೇಹಗಳನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago