ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆಪಡೆದರೂಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿಯಲ್ಲಿ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ 2024 ಆಗಸ್ಟ್ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.
ಇನ್ಸ್ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…