Featured

ಕುಂದಾಪುರ : ಪ್ರಧಾನಿ “ಪರೀಕ್ಷಾ ಪೇ ಚರ್ಚಾ’, ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ -Vishwanews24

ಕುಂದಾಪುರ : ಪ್ರಧಾನಿ “ಪರೀಕ್ಷಾ ಪೇ ಚರ್ಚಾ’, ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ -Vishwanews24

ಕುಂದಾಪುರ: ಪ್ರಧಾನಿ ಮೋದಿ ಅವರು ನಡೆಸಿಕೊಡುವ “ಪರೀಕ್ಷಾ ಪೇ ಚರ್ಚಾ’ – ವಿದ್ಯಾರ್ಥಿಗಳೊಡನೆ ಸಂವಾದ ಕಾರ್ಯಕ್ರಮಕ್ಕೆ ಅಲ್ಬಾಡಿ - ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅನುಷಾ ಅವರು ಆಯ್ಕೆಯಾಗಿದ್ದಾರೆ.

ದೇಶದ ವಿವಿಧೆಡೆಯಿಂದ 10.39 ಲಕ್ಷ ವಿದ್ಯಾರ್ಥಿಗಳು “ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗಿ ಆಗಲು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 1,500 ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮ ವೀಕ್ಷಿಸಲು ಆಯ್ಕೆಯಾಗಿದ್ದಾರೆ. ಇವರಲ್ಲಿ ಕೇವಲ 30 ವಿದ್ಯಾರ್ಥಿಗಳು ಮಾತ್ರ ಪ್ರಧಾನಿ ಜತೆಗೆ ಮಾತನಾಡಲಿದ್ದಾರೆ. ಇದಕ್ಕೆ ಆಯ್ಕೆಯಾಗಿರುವ ಆರ್ಡಿಯ ವಿದ್ಯಾರ್ಥಿನಿಯ ಹೆಸರು ಅನುಷಾ.

ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ದೇಶಾದ್ಯಂತ ಆಯ್ಕೆಯಾಗಿರುವ ಮೂವತ್ತು ಶಾಲೆಗಳಲ್ಲಿ ಆರ್ಡಿ- ಅಲ್ಬಾಡಿ ಶಾಲೆಯೂ ಒಂದು. ಕರ್ನಾಟಕದಿಂದ ಬೆಂಗಳೂರಿನ ಒಂದು ಮತ್ತು ಆರ್ಡಿ ಶಾಲೆ ಮಾತ್ರ ಆಯ್ಕೆಯಾಗಿವೆ.

ಚಾರಮಕ್ಕಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ತಯಾರಿಸಿದ್ದ “ಪರೀಕ್ಷಾ ಪೇ ಚರ್ಚಾ’ದ ಪ್ರಮೋಶನಲ್‌ ವೀಡಿಯೋವನ್ನು ಅಂದು ಪ್ರಧಾನಿ ಮೋದಿ ಅವರು ವೀಕ್ಷಿಸಲಿದ್ದು, ಸಂವಾದ ಸಂದರ್ಭ ವೀಡಿಯೋ ಕೂಡ ಪ್ರಸಾರವಾಗಲಿದೆ. ಇದಕ್ಕಾಗಿ ಶುಕ್ರವಾರ ದಿಲ್ಲಿಯ ತಂಡ ಶಾಲೆಗೆ ಬಂದು ಕಿರುಚಿತ್ರ ತಯಾರಿಸಲಿದೆ. ಸಂವಾದದ ದಿನ ಇನ್ನಷ್ಟೇ ನಿಗದಿಯಾಗಬೇಕಿದೆ.

ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಗುಡ್ಡೆಯಂಗಡಿ ನಿವಾಸಿ ಕೃಷ್ಣ ಕುಲಾಲ್‌-ಜಯಲಕ್ಷ್ಮೀ ದಂಪತಿಯ ಪುತ್ರಿ ಅನುಷಾ ಅಲಾºಡಿ-ಆರ್ಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ. ಈಕೆ ಭವಿಷ್ಯದಲ್ಲಿ ಎಂಜಿನಿಯರಿಂಗ್‌ ಮಾಡುವ ಕನಸು ಹೊಂದಿದ್ದಾರೆ.

“ಪರೀಕ್ಷಾ ಪೇ ಚರ್ಚಾ’ ಕಾರ್ಯ ಕ್ರಮದಲ್ಲಿ ಪ್ರಧಾನಿ ಜತೆ ಸಂವಾದ ನಡೆಸಲು ದೇಶದಲ್ಲಿ 30 ಮಂದಿಯಲ್ಲಿ ಒಬ್ಬಳಾಗಿ ಆಯ್ಕೆಯಾದುದು ಜೀವನದ ಅತ್ಯಂತ ಸಂತಸದ ಕ್ಷಣವಾಗಿದೆ. ಈ ಶಾಲೆಯ ವಿದ್ಯಾರ್ಥಿನಿ ಯಾದುದು ಅದೃಷ್ಟ. ನಂಬಲು ಅಸಾಧ್ಯ ವಾದ ಅವಕಾಶ ಇದು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುರೇಶ್‌ ಮರಕಾಲ ಮತ್ತು ಎಲ್ಲ ಶಿಕ್ಷಕ ವೃಂದದ ಶ್ರಮ, ಪ್ರೋತ್ಸಾಹದ ಫ‌ಲ.
– ಅನುಷಾ, “ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆಯಾಗಿರುವ ವಿದ್ಯಾರ್ಥಿನಿ

ಇದನ್ನೂ ಓದಿ :ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

15 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

15 hours ago