Featured

ಕುಂದಾಪುರ: ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ – vishwanews24

ಕುಂದಾಪುರ: ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಾರ್ವಜನಿಕ ಜೀವನದಲ್ಲಿ ನಿಷ್ಠುರ ಇಲ್ಲದೆ, ವೈಯಕ್ತಿಕ ದ್ವೇಷ ಇಲ್ಲದ, ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ ಪ್ರಮೋದ್‌ ಮಧ್ವರಾಜ್‌ ಅವರದ್ದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಗುರುವಾರ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ಹುಟ್ಟುಹಬ್ಬದ ದಿನ ಪ್ರಯುಕ್ತ ಹೊಸ ಬಸ್‌ ನಿಲ್ದಾಣದ ಹತ್ತಿರದ ಫೆರಿ ರಸ್ತೆಯ ರೋಟರಿ ಭವನದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸುತ್ತಲಿನ ಸಮಾಜ ವ್ಯಕ್ತಿಯನ್ನು ಅನುಮಾನಿಸುತ್ತದೆ, ಅವಮಾನಿಸು ತ್ತದೆ, ಎರಡನ್ನೂ ಮೀರಿ ಬೆಳೆದರೆ ಸಮ್ಮಾನಿಸುತ್ತದೆ. ಪ್ರಮೋದ್‌ಗೆ ಸಮಾಜ ಒಳ್ಳೆಯದು ಮತ್ತು ಕೆಟ್ಟದ್ದನ್ನು ಕೊಟ್ಟರೂ ಅವರು ಎಲ್ಲ ರನ್ನೂ ಪ್ರೀತಿಸುತ್ತಾ ಬೆಳೆದವರು. ನಂಬಲರ್ಹ ರಾಜಕಾರಣಿಯಾಗಿ ಜೀವನ ಸವೆಸಿದವರು ಎಂದರು.
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಹುಟ್ಟುಹಬ್ಬದಂದು ಆಡಂಬರ, ದುಂದುವೆಚ್ಚದ ಬದಲು ಇಂಥ ರಕ್ತದಾನ ಶಿಬಿರ ನಡೆಸುವುದು ಜನರ ಜೀವ ಉಳಿಸುವ ಕೆಲಸ. ಆದ್ದರಿಂದ ಪ್ರತಿವರ್ಷ ನಡೆ ಸುವ ಸಂಕಲ್ಪ ದಂತೆ ಇದೇ ಮಾದರಿ ಅನುಸರಿ ಸಲಾಗುತ್ತಿದೆ. ದಾನ ಪ್ರಚಾರಕ್ಕಾಗಿ ಇರಬಾರದು ಎಂದರು.

ಶಾಸಕ ಎ. ಕಿರಣ್‌ ಕುಮಾರ್‌ ಕೊಡ್ಗಿ, ಪುರಸಭೆ ಅಧ್ಯಕ್ಷ ಮೋಹನ್‌ ದಾಸ್‌ ಶೆಣೈ, ಸರಕಾರಿ ಆಸ್ಪತ್ರೆಯ ಡಾ| ನಾಗೇಶ್‌, ರೆಡ್‌ಕ್ರಾಸ್‌ ಸಭಾಪತಿ ಜಯಕರ ಶೆಟ್ಟಿ ಎಸ್‌., ಅಭಯ ಹಸ್ತ ಚಾರಿಟೆಬಲ್‌ ಟ್ರಸ್ಟ್‌ ನ ಸತೀಶ್‌ ಸಾಲ್ಯಾನ್‌ ಮಣಿಪಾಲ್‌, ಹಂಗಳೂರು ಲಯನ್ಸ್‌ ಅಧ್ಯಕ್ಷ ರೋವನ್‌ ಡಿ’ ಕೋಸ್ತಾ, ಯುವ ಬಂಟರ ಸಂಘ ಮಾಜಿ ಅಧ್ಯಕ್ಷ ಸುನಿಲ್‌ ಶೆಟ್ಟಿ ಹೇರಿಕುದ್ರು, ತಾ.ಪಂ. ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಹೇರಿಕುದ್ರು, ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷ ಸದಾನಂದ ಬಳ್ಕೂರು ಉಪಸ್ಥಿತರಿದ್ದರು.

Vishwa News 24

Recent Posts

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

3 hours ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

3 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

3 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

3 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

3 days ago