Featured

ಕುಂದಾಪುರ: ಬಡ ಫಲಾನುಭವಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಲಾಗುವುದು : ಶಾಸಕ ಕಿರಣ್ ಕೊಡ್ಗಿ – Vishwanews24

ಕುಂದಾಪುರ: ಬಡ ಫಲಾನುಭವಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಲಾಗುವುದು : ಶಾಸಕ ಕಿರಣ್ ಕೊಡ್ಗಿ

ಕುಂದಾಪುರ : ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನದ ಸಮುದ್ರತೀರದಲ್ಲಿ ಮನೆ ಅನಾದಿ ಕಾಲದಿಂದ ಮನೆ ಕಟ್ಟಿ ಕುಳಿತ ಬಡ ಫಲಾನುಭವಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಲಾಗುವುದು ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಈ ವರೆಗೆ ಹಕ್ಕುಪತ್ರ ಮಂಜೂರಾಗಿರಲಿಲ್ಲ. ಕೋಡಿ ಕನ್ಯಾನ ಮತ್ತು ಹೊಸಬೆಂಗ್ರೆಯ ಜನರ ಭೂಮಿ ಹಕ್ಕಿನ ಕನಸು ಇತ್ತೀಚೆಗೆ ನನಸಾಯಿತು. ಒಟ್ಟು 161 ಕುಟುಂಬಗಳಿಗೆ ಸರಕಾರಿ ಭೂಮಿ ಮಂಜೂರಾತಿ ಆದೇಶ ಆಗಿದೆ. 178ಜನರಿಗೆ ಪರಂಬೋಕು ಜಮೀನು 132. ಜನರಿಗೆ ಸಮುದ್ರ ತೀರ ಎಂದು ನಮೂದಾಗಿದ್ದ ಜಮೀನು ಮಂಜೂರಾಗಲು ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಅಂದಿನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಯತ್ನದಿಂದ ಜಾಗ ಮಂಜೂರಾಗಿದೆ ಎಂದರು.

ಇನ್ನು ಸೆಂಟ್‌ಗೆ 5 ಸಾವಿರ ರೂ. ಕಟ್ಟಿಸಲಾಗುತ್ತಿದ್ದು ಬಡವರಿಗೆ ಕಷ್ಟವಾಗುತ್ತಿದೆ. ಮಲ್ಪೆಯಲ್ಲಿ ಇಂತಹ ಪ್ರಕರಣದಲ್ಲಿ ಸೆಂಟ್‌ಗೆ 500 ರೂ. ಕಟ್ಟಿಸಲಾಗಿದ್ದು ಅದೇ ಮಾದರಿಯಲ್ಲಿ ಇಲ್ಲಿಯೂ ಹಣ ಪಾವತಿಗೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಕೋಡಿ ಕನ್ಯಾನ ಮತ್ತು ಹೊಸ ಬೆಂಗ್ರೆ ಜನತೆಯ ಈ ಭೂಮಿ ಹಕ್ಕಿನ ಹಲವು ಬಗ್ಗೆ ದಶಕಗಳಿಂದಲೂ ಮಾದರಿಯಲ್ಲಿ ಹೋರಾಟಗಳು ನಡೆದಿದ್ದವು. – ಎಲ್ಲ ದಾಖಲೆಗಳ ಸಂಗ್ರಹದ ಮೂಲಕ ಹಾಲಾಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳು ಮತ್ತು ಸಿಆರ್‌ಝಡ್ ಅಧಿಕಾರಿಗಳ ಸಭೆ ನಡೆಸಿ ನಿರಾಕ್ಷೇಪಣ ಪತ್ರ ನೀಡಲಾಗಿದ್ದು, ಕಡತವನ್ನು ಬೆಂಗಳೂರಿಗೆ ಒಯ್ದು ಸಚಿವಾಲಯದ ಹಿಂದೆ ಬಿದ್ದರು. ಅಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಸಚಿವರು ಮತ್ತು ಶಾಸಕರ ಸಮ್ಮುಖದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಸಭೆ ಕರೆದು ಚರ್ಚಿಸಿ ನೂರಾರು ಕುಟುಂಬಗಳಿಗೆ ಹಕ್ಕುಪತ್ರ ದೊರಕಿಸಲಾಗಿದೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago