ಕುಂದಾಪುರ: ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ.
ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಡಿಸೆಂಬರ್ 24ರಂದು ಕೆಎಸ್ಆರ್ಟಿಸಿ ಬಸ್ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ ಕೆಳಗೆ ಇಟ್ಟಿದ್ದರು.
ಇನ್ನು ತನ್ನ ಹುಟ್ಟೂರು ಮಾಬುಕಳ ತಲುಪಿದ ನಂತರ ಸಂಗೀತಾ ಇಳಿದು ಮನೆಗೆ ಬಂದಿದ್ದು, ಟ್ರಾಲಿ ಬ್ಯಾಗ್ನಲ್ಲಿ ಚಿನ್ನಾಭರಣಗಳಿದ್ದ ಕಾಟನ್ ಬ್ಯಾಗ್ ನಾಪತ್ತೆಯಾಗಿರುವು ತಿಳಿದು ಬಂದಿದೆ.
ತನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಹಿಂದಿ ಮಾತನಾಡುವ ಪುರುಷರ ಮೇಲೆ ಆಕೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳ್ಳತನ ನಡೆದ ಸ್ಥಳದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಂಗೀತಾ ಅವರು ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ತಿಳಿಯದೆ ಪರದಾಡಿದ್ದು, ಕೊನೆಗೆ ಆಕೆ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ಮಧು ಮುಂದಿನ ತನಿಖೆ ಕೈಗೊಂಡಿದ್ದಾರೆ.
Join our Whatsapp group by clicking the below link 👇👇
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…