ಕುಂದಾಪುರ: ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ.
ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಡಿಸೆಂಬರ್ 24ರಂದು ಕೆಎಸ್ಆರ್ಟಿಸಿ ಬಸ್ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ ಕೆಳಗೆ ಇಟ್ಟಿದ್ದರು.
ಇನ್ನು ತನ್ನ ಹುಟ್ಟೂರು ಮಾಬುಕಳ ತಲುಪಿದ ನಂತರ ಸಂಗೀತಾ ಇಳಿದು ಮನೆಗೆ ಬಂದಿದ್ದು, ಟ್ರಾಲಿ ಬ್ಯಾಗ್ನಲ್ಲಿ ಚಿನ್ನಾಭರಣಗಳಿದ್ದ ಕಾಟನ್ ಬ್ಯಾಗ್ ನಾಪತ್ತೆಯಾಗಿರುವು ತಿಳಿದು ಬಂದಿದೆ.
ತನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಹಿಂದಿ ಮಾತನಾಡುವ ಪುರುಷರ ಮೇಲೆ ಆಕೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳ್ಳತನ ನಡೆದ ಸ್ಥಳದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಂಗೀತಾ ಅವರು ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ತಿಳಿಯದೆ ಪರದಾಡಿದ್ದು, ಕೊನೆಗೆ ಆಕೆ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ಮಧು ಮುಂದಿನ ತನಿಖೆ ಕೈಗೊಂಡಿದ್ದಾರೆ.
Join our Whatsapp group by clicking the below link 👇👇
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…