Featured

ಕುಂದಾಪುರ: ಬಸ್ ನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು – Vishwanews24

ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಕಾಲೇಜು ವಿದ್ಯಾರ್ಥಿಗಳ ಅಪಾಯಕಾರಿ ಸಂಚಾರ..

ಬಸ್ ನಿಂದ ಇಳಿಯುತ್ತಿದ್ದಾಗ ವಿದ್ಯಾರ್ಥಿಯ ಮೇಲೆ ಹರಿದ ಬಸ್..

ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು..

ಹೆಚ್ಚುವರಿ ಸರ್ಕಾರಿ ಬಸ್ ಗೆ ಸಾರ್ವಜನಿಕರ ಆಗ್ರಹ..

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

ಜೀವಭಯದಲ್ಲೇ ಸಂಚಾರ
ಕುಂದಾಪುರ ಭಾಗದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಒಂದೇ ಸಮಯದಲ್ಲಿ ಆರಂಭವಾಗುವ ಕಾರಣ ಬೆಳಗ್ಗಿನ‌ ಶಾಲಾ-ಕಾಲೇಜು ಆರಂಭಗೊಳ್ಳುವ ಸಮಯದಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ ಗಳು ತುಂಬಿ ವಿದ್ಯಾರ್ಥಿಗಳು ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಜೀವಭಯದಲ್ಲೇ ನಿಂತು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೆಚ್ಚುವರಿ ಬಸ್ ಗೆ ಆಗ್ರಹ:
ವಿದ್ಯಾರ್ಥಿಗಳು ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ‌ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದರೂ ಏನೂ‌ ಕ್ರಮ ಕೈಗೊಳ್ಳದ ಆಡಳಿತದ ವಿರುದ್ದ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಶಾಲಾ- ಕಾಲೇಜಿಗೆ ಹೋಗುವ ಹಾಗೂ ಬರುವ ಸಮಯದಲ್ಲಾದರೂ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಬಿಡಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago