ಕುಂದಾಪುರ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿರಣ್ ಕುಮಾರ್ ಕೊಡ್ಗಿ, ಕ್ಷೇತ್ರ ಬಿಜೆಪಿಗೆ ಪೂರಕವಾದ ವಾತಾವರಣವಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಪ್ರಭಾವೂ ಕ್ಷೇತ್ರದಲ್ಲಿದೆ. ಅವರು ಸ್ವ ಇಚ್ಛೆಯಿಂದ ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ಹಾಗಾಗಿ ಪಕ್ಷ ನನಗೆ ಟಿಕೆಟು ನೀಡಿದೆ. ಹಿಂದಿನ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಂಪೂರ್ಣ ಅರಿವಿದೆ. ಕ್ಷೇತ್ರದ ಮತದಾರರನ್ನು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ತಹಶೀಲ್ದಾರ್ ಶೋಭಾಲಕ್ಷ್ಮೀ ಹಾಜರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…