Featured

ಕುಂದಾಪುರ ಬಿಜೆಪಿ ಭಿನ್ನಮತ ಮೌನ‌ಮುರಿದ ಹಾಲಾಡಿ.

udupi – ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ಪೋಟಗೊಂಡ ಬೆನ್ನಲ್ಲೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಮೌನಮುರಿದಿದ್ದಾರೆ. ಹೌದು ಭಿನ್ನಮತ, ವಿರೋಧ ಹೀಗೆ ಯಾವುದೇ ರಾಜಕೀಯ ಬೆಳವಣಿಗೆ ಬಗ್ಗೆ ಚಕಾರ ಎತ್ತದ ಹಾಲಾಡಿ ಇಂದು ಎಲ್ಲಾ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.
ಬಿಜೆಪಿ ತೊರೆದು ಪಕ್ಷೇತರರಾಗಿ ಗೆದ್ದು ಮತ್ತೆ ಬಿಜೆಪಿಗೆ ಬಂದ ಹಾಲಾಡಿ ಶ್ರೀನಿವಾಸ ಶೆಟ್ಟಿವರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧದ ನಡುವೆಯೂ ಟಿಕೆಟ್ ಸಿಕ್ಕಿರುವುದು ಮೂಲ ಬಿಜೆಪಿಗರನ್ನು ಕೆರಳಿಸಿದೆ. ಇದಕ್ಕೆ 7ಮಂದಿ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹಾಲಾಡಿ ವಿರುದ್ದ ಕೆಲಸ ಮಾಡುವ ಶಪಥ ಕೈಗೊಂಡಿದ್ರು ಇದಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದೊಳಗಿನ ಭಿನ್ನಮತವನ್ನು ರಾಜ್ಯಾಧ್ಯಕ್ಷ ರು ಶಮನ ಮಾಡುತ್ತಾರೆ. ಅಧಿಕೃತ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆಯಾಗಿದೆ.ಅತೀ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇನೆ.ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ. ಭಿನ್ನಮತೀಯರು ಪಕ್ಷದಲ್ಲಿ ಇದ್ದಾರೋ ಇಲ್ಲವೋ ಅವರೇ ತೀರ್ಮಾನಿಸಲಿ. ಪಕ್ಷದಲ್ಲಿದ್ದರೆ ಅಭ್ಯರ್ಥಿ ಪರ ಕೆಲಸ ಮಾಡಬೇಕು. ಪಕ್ಷ ತೊರೆದವರಿಂದ ಯಾವ ಹಾನಿಯಾಗುತ್ತದೆ ಎಂದು ಜನರಿಗೆ ಗೊತ್ತು ಎಂದು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಇನ್ನು ಸಂಸದೆ ಶೋಭಾ ಕರಂದ್ಲಾಜೆ ಕೂಡ ಈ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ, ಎಲ್ಲೆಲ್ಲಿ ಭಿನ್ನಮತವಿರುತ್ತೋ ಅದನ್ನು ಶಮನ ಮಾಡಲಾಗುವುದು. ಯಾವುದೇ ಪಕ್ಷದಲ್ಲಿ ಹೆಚ್ಚುವರಿ ಟಿಕೆಟ್ ಆಕಾಂಕ್ಷಿಯಿರ್ತಾರೆ. ಆದರೆ ಟಿಕೆಟ್ ಒಬ್ಬರಿಗೆ ಸಿಗಲಿದೆ.ಟಿಕೆಟ್ ಸಿಗದವರು ಅಭ್ಯರ್ಥಿಯ ಪರ ಕೆಲಸ ಮಾಡಲಿ. ಕುಂದಾಪುರದಲ್ಲಿ ಕೂಡ ಈ ಅಸಮಧಾನ ಗಮನಕ್ಕೆ ಬಂದಿದೆ. ಯಾರೂ ಅಸಮಧಾನಗೊಂಡಿದ್ದಾರೋ ಅವರನ್ನು ಸಮಾಧಾನಪಡಿಸುತ್ತೇವೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತೇವೆ. ಹೀಗಾಗಿ ಸರ್ವೇ ಆಧಾರದಲ್ಲಿ ಟಿಕೆಟ್ ನೀಡಲಾಗುತ್ತಿದೆ ಎಂದ್ರು.
ಒಟ್ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಶಮನ ಮಾಡುವ ಕಾರ್ಯ ತೆರೆಮರೆಯ ಹಿಂದೆ ಭರದಿಂದ ಸಾಗಿದೆ. ಇತ್ತ ಹಾಲಾಡಿ ಶ್ರೀನಿವಾಸ ಶೆಟ್ಟಿ ಯಾವುದೇ ವಿರೋಧಗಳಿಗೆ ತಲೆಕೆಡಿಸಿಕೊಳ್ಳದೆ ಎಂದಿನಂತೆ ನಾನೇ ಗೆಲ್ಲುತ್ತೇನೆ ಎಂಬ ಭರವಸೆಯಲ್ಲೇ ಮುಂದೆ ಸಾಗುತ್ತಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಸೆಳೆದಿರುವ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಾಡಿ ಭವಿಷ್ಯ ಯಾವರೀತಿ ಇರಲಿದೆ ಎಂಬುದನ್ನು ಮತಎಣಿಕೆಯ ದಿನವೇ ಕಾದುನೋಡಬೇಕಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

10 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

10 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

10 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

11 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

12 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

12 hours ago