ಕುಂದಾಪುರ : ಬಿ.ಎಂ.ಸುಕುಮಾರ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ – Vishwanews24

Featured, ಉಡುಪಿ

ಕುಂದಾಪುರ:  ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

ಕುಂದಾಪುರ: ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇಂದು (ಮಾ.12) ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ಈ ಬಗ್ಗೆ ಅವರು ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಳೆದ ಅವಧಿಯಲ್ಲಿ ಬಿ.ಎಂ.ಸುಕುಮಾರ ಶೆಟ್ಟಿ ಬೈಂದೂರು ಶಾಸಕರಾಗಿದ್ದರು. ಆದರೆ 2023ರ ವಿಧಾನಸಭಾ ಚುಮಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದಾದ ಬಳಿಕ ಸುಕುಮಾರ ಶೆಟ್ಟಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಗಳು ಕೇಳಿಬಂದಿದ್ದು ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಕೆಲವು ಸಚಿವರನ್ನು ಭೇಟಿಯಾಗಿದ್ದರು.

ಬಂಟ್ವಾಳ : ಮರಕ್ಕೆ ಬೈಕ್ ಡಿಕ್ಕಿ ; ಸವಾರ ಸಾವು – Vishwanews24

ಸೋಮವಾರ ಸುರ್ಜೇವಾಲರ ಭೇಟಿ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮುಖಂಡರಾದ ಆಯನೂರು ಮಂಜುನಾಥ್, ಸುಧೀರ್ ಕುಮಾರ್ ಮುರೊಳ್ಳಿ ಮೊದಲಾದವರಿದ್ದರು.

ಉಡುಪಿ:  ಜಯ ಪ್ರಕಾಶ್‌ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ – Vishwanews24

Leave a Reply