Featured

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ

ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.

ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು.

ಸರ್ಕಾರಿ ಸೌಲಭ್ಯ ಒದಗಿಸುವುದಾಗಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಅಧಿಕಾರಿಗಳು ಮಾಹಿತಿ ಪರಿಶೀಲಿಸಿದರು.

ಬೇಳೂರು ಗ್ರಾ.ಪಂ. ವ್ಯಾಪ್ತಿಯ ಕಲ್ಲು ಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಈ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಪಂಚಾಯಿತಿಯ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Vishwa News 24

Recent Posts

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

9 minutes ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

2 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

2 hours ago

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ – vishwanews24

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ…

3 hours ago

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ  – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ  500 ಪ್ರವಾಸಿಗರಿಗೆ ಮಾತ್ರ ಅವಕಾಶ  ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಸೆ.…

3 hours ago

ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ – vishwanews24

ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ ಕುಂದಾಪುರ: ಮೀನುಗಾರಿಕೆ ವಲಯದ ಜ್ವಲಂತ ಸಮಸ್ಯೆಗಳ ಕುರಿತು ಅರಿಯಲು,…

3 hours ago