ಕುಂದಾಪುರ: ಬೈಕುಗಳೆರಡರ ಡಿಕ್ಕಿ ಸಂಭವಿಸಿದ ಪರಿಣಾಮ, ದಂಪತಿಗಳು ಪ್ರಯಾಣಿಸುತ್ತಿದ್ದ ಬೈಕ್ನಲ್ಲಿದ್ದ ಪತಿ ಹಾಗೂ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೆಡ್ತೆರೆ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಸ್ಥಳೀಯ ನಿವಾಸಿ ಜಗದೀಶ ಪಟ್ವಾಲ್ ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡವರು.
ಜಗದೀಶ್ ಪಟ್ವಾಲ್ ಅವರು ಬೈಕಿನಲ್ಲಿ ತನ್ನ ಪತ್ನಿ ಆಶಾ ಅವರನ್ನು ಕುಳ್ಳಿರಿಸಿಕೊಂಡು, ಬಿಜೂರು ಕಡೆಯಿಂದ ಬಂದು ಕೊಲ್ಲೂರು ರಸ್ತೆ ಕಡೆಗೆ ಹೋಗುತ್ತಿದ್ದಾಗ ಯಡ್ತರೆ ಜಂಕ್ಷನ್ ಬಳಿ ಮೋಟಾರು ಸೈಕಲ್ ನ ಬಲಬದಿಯ ಇಂಡಿಕೇಟರ್ ಹಾಕಿ ಬಲ ಬದಿಗೆ ತಿರುಗಿಸುತ್ತಿದ್ದ ಸಂದರ್ಭ ಮಹಮ್ಮದ್ ಇಬ್ರಾಹಿಂ ಎಂಬಾತ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ.
ಇನ್ನು ಬೈಕ್ ಸವಾರ ಜಗದೀಶ್ ಪಟ್ವಾಲ್ ಹಾಗೂ ಸಹ ಸವಾರಳು ರಸ್ತೆಗೆ ಬಿದ್ದಿದ್ದು ಜಗದೀಶ್ ಪಟ್ವಾಲ್ ರವರಿಗೆ ಹೊಟ್ಟೆಯ ಭಾಗ, ಸೊಂಟಕ್ಕೆ ಒಳ ನೋವು ಹಾಗೂ ರಕ್ತಗಾಯವಾಗಿತ್ತು. ಆಶಾ ಅವರಿಗೆ ತಲೆ, ಬಲಕೈಗೆ ರಕ್ತ ಗಾಯವಾಗಿದ್ದು, ಗಾಯಾಳುಗಳನ್ನು ಗುರುಕಿರಣ ಹಾಗೂ ಶ್ರೀಧರ್ ರವರು ಚಿಕಿತ್ಸೆ ಬಗ್ಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಿದ್ದಾರೆ. ಆದರೆ ಜಗದೀಶ್ ದಾರಿಮಧ್ಯೆ ಮೃತಪಟ್ಟಿದ್ದಾರೆ. ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ..ಕಾರ್ಯಕರ್ತರಿಂದ ಪ್ರತಿಭಟನೆ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…