ಕುಂದಾಪುರ: ಬೈಕುಗಳೆರಡರ ಡಿಕ್ಕಿ ಸಂಭವಿಸಿದ ಪರಿಣಾಮ, ದಂಪತಿಗಳು ಪ್ರಯಾಣಿಸುತ್ತಿದ್ದ ಬೈಕ್ನಲ್ಲಿದ್ದ ಪತಿ ಹಾಗೂ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೆಡ್ತೆರೆ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಸ್ಥಳೀಯ ನಿವಾಸಿ ಜಗದೀಶ ಪಟ್ವಾಲ್ ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡವರು.
ಜಗದೀಶ್ ಪಟ್ವಾಲ್ ಅವರು ಬೈಕಿನಲ್ಲಿ ತನ್ನ ಪತ್ನಿ ಆಶಾ ಅವರನ್ನು ಕುಳ್ಳಿರಿಸಿಕೊಂಡು, ಬಿಜೂರು ಕಡೆಯಿಂದ ಬಂದು ಕೊಲ್ಲೂರು ರಸ್ತೆ ಕಡೆಗೆ ಹೋಗುತ್ತಿದ್ದಾಗ ಯಡ್ತರೆ ಜಂಕ್ಷನ್ ಬಳಿ ಮೋಟಾರು ಸೈಕಲ್ ನ ಬಲಬದಿಯ ಇಂಡಿಕೇಟರ್ ಹಾಕಿ ಬಲ ಬದಿಗೆ ತಿರುಗಿಸುತ್ತಿದ್ದ ಸಂದರ್ಭ ಮಹಮ್ಮದ್ ಇಬ್ರಾಹಿಂ ಎಂಬಾತ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ.
ಇನ್ನು ಬೈಕ್ ಸವಾರ ಜಗದೀಶ್ ಪಟ್ವಾಲ್ ಹಾಗೂ ಸಹ ಸವಾರಳು ರಸ್ತೆಗೆ ಬಿದ್ದಿದ್ದು ಜಗದೀಶ್ ಪಟ್ವಾಲ್ ರವರಿಗೆ ಹೊಟ್ಟೆಯ ಭಾಗ, ಸೊಂಟಕ್ಕೆ ಒಳ ನೋವು ಹಾಗೂ ರಕ್ತಗಾಯವಾಗಿತ್ತು. ಆಶಾ ಅವರಿಗೆ ತಲೆ, ಬಲಕೈಗೆ ರಕ್ತ ಗಾಯವಾಗಿದ್ದು, ಗಾಯಾಳುಗಳನ್ನು ಗುರುಕಿರಣ ಹಾಗೂ ಶ್ರೀಧರ್ ರವರು ಚಿಕಿತ್ಸೆ ಬಗ್ಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಿದ್ದಾರೆ. ಆದರೆ ಜಗದೀಶ್ ದಾರಿಮಧ್ಯೆ ಮೃತಪಟ್ಟಿದ್ದಾರೆ. ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ..ಕಾರ್ಯಕರ್ತರಿಂದ ಪ್ರತಿಭಟನೆ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…