ಕುಂದಾಪುರ: ಬೈಕುಗಳೆರಡರ ಡಿಕ್ಕಿ ಸಂಭವಿಸಿದ ಪರಿಣಾಮ, ದಂಪತಿಗಳು ಪ್ರಯಾಣಿಸುತ್ತಿದ್ದ ಬೈಕ್ನಲ್ಲಿದ್ದ ಪತಿ ಹಾಗೂ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೆಡ್ತೆರೆ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಸ್ಥಳೀಯ ನಿವಾಸಿ ಜಗದೀಶ ಪಟ್ವಾಲ್ ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡವರು.
ಜಗದೀಶ್ ಪಟ್ವಾಲ್ ಅವರು ಬೈಕಿನಲ್ಲಿ ತನ್ನ ಪತ್ನಿ ಆಶಾ ಅವರನ್ನು ಕುಳ್ಳಿರಿಸಿಕೊಂಡು, ಬಿಜೂರು ಕಡೆಯಿಂದ ಬಂದು ಕೊಲ್ಲೂರು ರಸ್ತೆ ಕಡೆಗೆ ಹೋಗುತ್ತಿದ್ದಾಗ ಯಡ್ತರೆ ಜಂಕ್ಷನ್ ಬಳಿ ಮೋಟಾರು ಸೈಕಲ್ ನ ಬಲಬದಿಯ ಇಂಡಿಕೇಟರ್ ಹಾಕಿ ಬಲ ಬದಿಗೆ ತಿರುಗಿಸುತ್ತಿದ್ದ ಸಂದರ್ಭ ಮಹಮ್ಮದ್ ಇಬ್ರಾಹಿಂ ಎಂಬಾತ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ.
ಇನ್ನು ಬೈಕ್ ಸವಾರ ಜಗದೀಶ್ ಪಟ್ವಾಲ್ ಹಾಗೂ ಸಹ ಸವಾರಳು ರಸ್ತೆಗೆ ಬಿದ್ದಿದ್ದು ಜಗದೀಶ್ ಪಟ್ವಾಲ್ ರವರಿಗೆ ಹೊಟ್ಟೆಯ ಭಾಗ, ಸೊಂಟಕ್ಕೆ ಒಳ ನೋವು ಹಾಗೂ ರಕ್ತಗಾಯವಾಗಿತ್ತು. ಆಶಾ ಅವರಿಗೆ ತಲೆ, ಬಲಕೈಗೆ ರಕ್ತ ಗಾಯವಾಗಿದ್ದು, ಗಾಯಾಳುಗಳನ್ನು ಗುರುಕಿರಣ ಹಾಗೂ ಶ್ರೀಧರ್ ರವರು ಚಿಕಿತ್ಸೆ ಬಗ್ಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗಿದ್ದಾರೆ. ಆದರೆ ಜಗದೀಶ್ ದಾರಿಮಧ್ಯೆ ಮೃತಪಟ್ಟಿದ್ದಾರೆ. ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ..ಕಾರ್ಯಕರ್ತರಿಂದ ಪ್ರತಿಭಟನೆ – Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…