ಉಡುಪಿ

ಕುಂದಾಪುರ: ಬೊಲೆರೋ ವಾಹನದಲ್ಲಿ ಅಕ್ರಮ ಗೋ ಸಾಗಾಟ; ಇಬ್ಬರ ಬಂಧನ, ಓರ್ವ ಪರಾರಿ -Vishwanews24

ಕುಂದಾಪುರ: ಬೊಲೆರೋ ವಾಹನದಲ್ಲಿ ಅಕ್ರಮ ಗೋ ಸಾಗಾಟ; ಇಬ್ಬರ ಬಂಧನ, ಓರ್ವ ಪರಾರಿ -Vishwanews24

ಕುಂದಾಪುರ: ಬೊಲೆರೋ ವಾಹನದಲ್ಲಿ ಕಳವು ಮಾಡಿದ ಮೂರು ಜಾನುವಾರುಗಳನ್ನು ಅಕ್ರಮವಾಗಿ ಮತ್ತು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ಕಂಡ್ಲೂರಿನಲ್ಲಿರುವ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಮುಂಜಾನೆ ಕಾವ್ರಾಡಿ ಗ್ರಾಮದ ಜನತಾ ಕಾಲೋನಿ ಮಣ್ಣು ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ಮುತಾಯಬ್ ಹಾಗೂ ಕಂಡ್ಲೂರಿನ ರಿದಾನ್ ಬಂಧಿತ ಆರೋಪಿಗಳಾಗಿದ್ದು ಕಂಡ್ಲೂರಿನ ಸಮೀರ ಎನ್ನುವಾತ ಪರಾರಿಯಾಗಿದ್ದಾನೆ.

ಕುಂದಾಪುರ ಗ್ರಾಮಾಂತರ ಠಾಣೆ ಎಎಸ್ಐ ರವೀಶ್ ಹೊಳ್ಳ ಎನ್ನುವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದು ಮಂಗಳವಾರ ಬೆಳಿಗ್ಗೆ 5.30 ಕ್ಕೆ ಧೂಪದಕಟ್ಟೆ ಕಡೆಯಿಂದ ಒಳರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಅದರ ಹಿಂಬದಿ ಒಂದು ಕಪ್ಪು ಬೊಲೆರೊ ವಾಹನ ವೇಗವಾಗಿ ಬಂದಿದ್ದು ಪೊಲೀಸರು ಎದರಿಗಿದ್ದ ದ್ವಿಚಕ್ರ ವಾಹನ ಚಾಲಕನನ್ನು ನಿಲ್ಲಿಸಲು ಯತ್ನಿಸಿದರೂ ಸವಾರ ಕಂಡ್ಲೂರಿನ ರಿದಾನ್ ನಿಲ್ಲಿಸದೆ ಮುಂದಕ್ಕೆ ಹೋಗಿದ್ದ. ಬಳಿಕ ಹಿಂಬದಿ ಬರುತ್ತಿದ್ದ ಬೊಲೆರೊ ಚಾಲಕನು ವಾಹನವನ್ನು ಸ್ವಲ್ಪ ಹಿಂಬದಿ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಅದರಲ್ಲಿದ್ದ ಇನ್ನೊರ್ವನೊಂದಿಗೆ ಪರಾರಿಯಾಗಿರುತ್ತಾನೆ. ಇಬ್ಬರನ್ನು ಪರಿಶೀಲಿಸುವಾಗ ಚಾಲಕ ಕಂಡ್ಲೂರಿನ ಸಮೀರ್‌ ಹಾಗೂ ಇನ್ನೋರ್ವನು ಮುತಾಯಿಬ್‌ ‌ಎಂಬುದು ತಿಳಿದುಬಂದಿದೆ. ಆರೋಪಿಗಳು KA 46 M 0344 ನೇ ಬೊಲೆರೋ ವಾಹನದ ಹಿಂಬದಿ ಸೀಟ್‌ ತೆಗೆದು ಅದರಲ್ಲಿ 3 ಗಂಡು ಕರುಗಳನ್ನು ಹಿಂಸಾತ್ಮಕವಾಗಿ ಕಾಲುಗಳನ್ನು ಕಟ್ಟಿ ತುಂಬಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಮೂವರು ಆರೋಪಿಗಳು ಕಳವು ಮಾಡಿದ್ದಲ್ಲದೇ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದ್ದು ತನಿಖೆ ನಡೆಯುತ್ತಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago