ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ – Vishwanews24

Featured, ಉಡುಪಿ

ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ

ಕುಂದಾಪುರ: ಬೊಬ್ಬರ್ಯನಕಟ್ಟೆ ಎದುರಿನ ಮೇಲ್ಸೇತುವೆ ಮೇಲೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಪುತ್ರ ಬದುಕುಳಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ವೇಗವಾಗಿ ಬಂದ ಕಾರು ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತರನ್ನು ಕೇರಳದ ಕಣ್ಣೂರು ಮೂಲದ ಮುನ್ನಾವರ್ (49), ಅವರ ಪತ್ನಿ ಸಮೀರ (41) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಪುತ್ರ ಸುಹೇಲ್ (18) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.

ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ಸಿಎಂ – Vishwanews24

ಅವರ ಪತ್ನಿ ಸಮೀರಾ ಕೇರಳದ ಕಣ್ಣೂರಿನವರಾದ ಕಾರಣ ಮುನ್ನಾವರ್ ಮತ್ತು ಅವರ ಕುಟುಂಬ ಕೊಲ್ಲಾಪುರದಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. ಅವಘಡ ಸಂಭವಿಸಿದ ಕೂಡಲೇ ಕಾರಿನಲ್ಲಿದ್ದ ಮೂವರನ್ನೂ ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ದಾಖಲಿಸಿದ ತಕ್ಷಣ ಸಮೀರ ಮೃತಪಟ್ಟರೆ, ಮುನ್ನಾವರ್ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟರು. ಮರಣೋತ್ತರ ಪರೀಕ್ಷೆ ಬಳಿಕ ಇಬ್ಬರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಚಾಲಕ ಮುನ್ನಾವರ್‌ನ ಅತಿವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕುಂದಾಪುರ ಸಂಚಾರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು:  ಎಳನೀರು ಕುಡಿದು 15 ಮಂದಿ ಅಸ್ವಸ್ಥ – Vishwanews24

Leave a Reply