Featured

ಕುಂದಾಪುರ:  ಭೀಕರ ರಸ್ತೆ ಅಪಘಾತ  ; ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರ – Vishwanews24

ಕುಂದಾಪುರ:  ಭೀಕರ ರಸ್ತೆ ಅಪಘಾತ  ; ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ನಡೆದಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫ್ಲೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ ಸಂಪೂರ್ಣ ನುಚ್ಚು ನೂರಾಗಿರುವ ಇನ್ನೋವಾ ಕಾರಿನಲ್ಲಿದ್ದ ಮೂವರ ಪೈಕಿ ಒಬ್ಬರು ಜೀವನ್ಮರಣ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ .

ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಸಂದರ್ಭ ಸರ್ವಿಸ್‌ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಸರ್ವಿಸ್ ರಸ್ತೆಯಲ್ಲಿ ಮಗುಚಿ ಬಿದ್ದ ಕಾರಿನಿಂದಾಗಿ ಸಂಚಾರ ಸಮಸ್ಯೆ ಉಂಟಾಗಿದ್ದು ಸ್ಥಳೀಯ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ ಕೊಟ್ಟರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

19 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago