ಕುಂದಾಪುರ: ಮಾರಣಕಟ್ಟೆ ಕಡೆಯಿಂದ ಶಂಕರನಾರಾಯಣ ಕಾಲೇಜಿಗೆ ಹೋಗುವ ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಹು ಬೇಡಿಕೆಯ ಮಾರಣಕಟ್ಟೆ – ಹಾಲಾಡಿ ಕೆಎಸ್ಆರ್ಟಿಸಿ ಬಸ್ ಸಂಚಾರ ಜ. 14ರಂದು ಆರಂಭ ಗೊಳ್ಳಲಿದೆ. ಇದರಿಂದ ಈ ಭಾಗದ ನೂರಾರು ಮಂದಿ ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಮಾರಣಕಟ್ಟೆ ಹಾಗೂ ಸುತ್ತಮುತ್ತಲಿನ ಊರಿನ ನೂರಾರು ವಿದ್ಯಾರ್ಥಿಗಳು ಶಂಕರನಾರಾಯಣ ಕಾಲೇಜಿಗೆ ತೆರಳಲು ಬಸ್ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಶಾಸಕ ಸುಕುಮಾರ್ ಶೆಟ್ಟರಲ್ಲಿ ಬಸ್ಆರಂಭಿಸಲು ಆಗ್ರಹಿಸಿದ್ದರು. ಈ ಕುರಿತಂತೆ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್ಆರ್ಟಿಸಿ ಡಿಸಿ, ಪ್ರಾದೇಶಿಕ ಸಾರಿಗೆ ಆಯುಕ್ತ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತುರ್ತಾಗಿ ಬಸ್ ಆರಂಭಿಸಲು ಸೂಚಿಸಿದರು. ಅದರಂತೆ ಜ. 14ರಿಂದ ಮಾರಣಕಟ್ಟೆ- ಶಂಕರ ನಾರಾಯಣ – ಹಾಲಾಡಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದ್ದು ದಿನ ಗಳಲ್ಲಿ 4 ಟ್ರಿಪ್ ಗಳಲ್ಲಿ ಬಸ್ ಸಂಚರಿಸಲಿದೆ.
ಮಾರಣಕಟ್ಟೆಯಿಂದ ಬೆಳಗ್ಗೆ 8ಕ್ಕೆ ಬಸ್ ಹೊರಟು, ವಂಡ್ಸೆ, ನೆಂಪು, ನೇರಳಕಟ್ಟೆ, ಅಂಪಾರು, ಕ್ರೋಢಬೈಲೂರು, ಶಂಕರನಾರಾಯಣ ಆಗಿ ಹಾಲಾಡಿಯವರೆಗೆ ಸಂಚರಿಸಲಿದೆ. ಮಧ್ಯದ ಅವಧಿಯಲ್ಲಿ ಒಂದೆರಡು ಟ್ರಿಪ್ ಹಾಗೆಯೇ ಸಂಜೆ ಹಾಲಾಡಿಯಿಂದ ಶಂಕರನಾರಾಯಣ ಮೂಲಕ ಮಾರಣಕಟ್ಟೆಯವರೆಗೆ ಸಂಚರಿಸಲಿದೆ. ಇದರಿಂದ ಕ್ರೋಢ ಬೈಲೂರಿನ ಮಕ್ಕಳು, ಸಾರ್ವಜನಿಕರಿಗೂ ಅನುಕೂಲವಾದಂತಾಗಿದೆ.
ಇಲ್ಲಿಗೆ ಯಾವುದೇ ಬಸ್ ಸಂಚಾರವಿರಲಿಲ್ಲ. ಇದರಿಂದ ಶಂಕರ ನಾರಾಯಣ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ 170 ಮಂದಿ ಮಕ್ಕಳು, ಮದರ್ ಥೆರೆಸಾ ಶಿಕ್ಷಣ ಸಂಸ್ಥೆಗೆ ತೆರಳುವ 90 ಮಂದಿ ಮಕ್ಕಳು, ಇನ್ನುಳಿದ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಮಕ್ಕಳಿಗೂ ಅನುಕೂಲವಾಗಲಿದೆ. ಕೆಲವರು ನಿಗದಿತ ಸಮಯಕ್ಕೆ ಬಸ್ ಇಲ್ಲದೆ ಕುಂದಾಪುರಕ್ಕೆ ಹೋಗಿ ಶಂಕರನಾರಾಯಣಕ್ಕೆ, ಮತ್ತೆ ಕೆಲವರು ಸಿದ್ದಾಪುರಕ್ಕೆ ತೆರಳಿ ಶಂಕರನಾರಾಯಣಕ್ಕೆ ಸುತ್ತು ಬಳಸಿ ಬರುತ್ತಿದ್ದರು.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…