ಕುಂದಾಪುರ: ಮಾರಣಕಟ್ಟೆ ಕಡೆಯಿಂದ ಶಂಕರನಾರಾಯಣ ಕಾಲೇಜಿಗೆ ಹೋಗುವ ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಹು ಬೇಡಿಕೆಯ ಮಾರಣಕಟ್ಟೆ – ಹಾಲಾಡಿ ಕೆಎಸ್ಆರ್ಟಿಸಿ ಬಸ್ ಸಂಚಾರ ಜ. 14ರಂದು ಆರಂಭ ಗೊಳ್ಳಲಿದೆ. ಇದರಿಂದ ಈ ಭಾಗದ ನೂರಾರು ಮಂದಿ ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಮಾರಣಕಟ್ಟೆ ಹಾಗೂ ಸುತ್ತಮುತ್ತಲಿನ ಊರಿನ ನೂರಾರು ವಿದ್ಯಾರ್ಥಿಗಳು ಶಂಕರನಾರಾಯಣ ಕಾಲೇಜಿಗೆ ತೆರಳಲು ಬಸ್ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಶಾಸಕ ಸುಕುಮಾರ್ ಶೆಟ್ಟರಲ್ಲಿ ಬಸ್ಆರಂಭಿಸಲು ಆಗ್ರಹಿಸಿದ್ದರು. ಈ ಕುರಿತಂತೆ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್ಆರ್ಟಿಸಿ ಡಿಸಿ, ಪ್ರಾದೇಶಿಕ ಸಾರಿಗೆ ಆಯುಕ್ತ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತುರ್ತಾಗಿ ಬಸ್ ಆರಂಭಿಸಲು ಸೂಚಿಸಿದರು. ಅದರಂತೆ ಜ. 14ರಿಂದ ಮಾರಣಕಟ್ಟೆ- ಶಂಕರ ನಾರಾಯಣ – ಹಾಲಾಡಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದ್ದು ದಿನ ಗಳಲ್ಲಿ 4 ಟ್ರಿಪ್ ಗಳಲ್ಲಿ ಬಸ್ ಸಂಚರಿಸಲಿದೆ.
ಮಾರಣಕಟ್ಟೆಯಿಂದ ಬೆಳಗ್ಗೆ 8ಕ್ಕೆ ಬಸ್ ಹೊರಟು, ವಂಡ್ಸೆ, ನೆಂಪು, ನೇರಳಕಟ್ಟೆ, ಅಂಪಾರು, ಕ್ರೋಢಬೈಲೂರು, ಶಂಕರನಾರಾಯಣ ಆಗಿ ಹಾಲಾಡಿಯವರೆಗೆ ಸಂಚರಿಸಲಿದೆ. ಮಧ್ಯದ ಅವಧಿಯಲ್ಲಿ ಒಂದೆರಡು ಟ್ರಿಪ್ ಹಾಗೆಯೇ ಸಂಜೆ ಹಾಲಾಡಿಯಿಂದ ಶಂಕರನಾರಾಯಣ ಮೂಲಕ ಮಾರಣಕಟ್ಟೆಯವರೆಗೆ ಸಂಚರಿಸಲಿದೆ. ಇದರಿಂದ ಕ್ರೋಢ ಬೈಲೂರಿನ ಮಕ್ಕಳು, ಸಾರ್ವಜನಿಕರಿಗೂ ಅನುಕೂಲವಾದಂತಾಗಿದೆ.
ಇಲ್ಲಿಗೆ ಯಾವುದೇ ಬಸ್ ಸಂಚಾರವಿರಲಿಲ್ಲ. ಇದರಿಂದ ಶಂಕರ ನಾರಾಯಣ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ 170 ಮಂದಿ ಮಕ್ಕಳು, ಮದರ್ ಥೆರೆಸಾ ಶಿಕ್ಷಣ ಸಂಸ್ಥೆಗೆ ತೆರಳುವ 90 ಮಂದಿ ಮಕ್ಕಳು, ಇನ್ನುಳಿದ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಮಕ್ಕಳಿಗೂ ಅನುಕೂಲವಾಗಲಿದೆ. ಕೆಲವರು ನಿಗದಿತ ಸಮಯಕ್ಕೆ ಬಸ್ ಇಲ್ಲದೆ ಕುಂದಾಪುರಕ್ಕೆ ಹೋಗಿ ಶಂಕರನಾರಾಯಣಕ್ಕೆ, ಮತ್ತೆ ಕೆಲವರು ಸಿದ್ದಾಪುರಕ್ಕೆ ತೆರಳಿ ಶಂಕರನಾರಾಯಣಕ್ಕೆ ಸುತ್ತು ಬಳಸಿ ಬರುತ್ತಿದ್ದರು.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…