Featured

ಕುಂದಾಪುರ: ಮಾರಣಕಟ್ಟೆ –ಹಾಲಾಡಿ KSRTC ಬಸ್‌ ಸಂಚಾರ ಆರಂಭ ; ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ – Vishwanews24

ಕುಂದಾಪುರ: ಮಾರಣಕಟ್ಟೆ –ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭ  ; ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ

ಕುಂದಾಪುರ: ಮಾರಣಕಟ್ಟೆ ಕಡೆಯಿಂದ ಶಂಕರನಾರಾಯಣ ಕಾಲೇಜಿಗೆ ಹೋಗುವ ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಹು ಬೇಡಿಕೆಯ ಮಾರಣಕಟ್ಟೆ – ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಜ. 14ರಂದು ಆರಂಭ ಗೊಳ್ಳಲಿದೆ. ಇದರಿಂದ ಈ ಭಾಗದ ನೂರಾರು ಮಂದಿ ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಮಾರಣಕಟ್ಟೆ ಹಾಗೂ ಸುತ್ತಮುತ್ತಲಿನ ಊರಿನ ನೂರಾರು ವಿದ್ಯಾರ್ಥಿಗಳು ಶಂಕರನಾರಾಯಣ ಕಾಲೇಜಿಗೆ ತೆರಳಲು ಬಸ್‌ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಶಾಸಕ ಸುಕುಮಾರ್‌ ಶೆಟ್ಟರಲ್ಲಿ ಬಸ್‌ಆರಂಭಿಸಲು ಆಗ್ರಹಿಸಿದ್ದರು. ಈ ಕುರಿತಂತೆ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್‌ಆರ್‌ಟಿಸಿ ಡಿಸಿ, ಪ್ರಾದೇಶಿಕ ಸಾರಿಗೆ ಆಯುಕ್ತ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತುರ್ತಾಗಿ ಬಸ್‌ ಆರಂಭಿಸಲು ಸೂಚಿಸಿದರು. ಅದರಂತೆ ಜ. 14ರಿಂದ ಮಾರಣಕಟ್ಟೆ- ಶಂಕರ ನಾರಾಯಣ – ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭಗೊಳ್ಳಲಿದ್ದು ದಿನ ಗಳಲ್ಲಿ 4 ಟ್ರಿಪ್‌ ಗಳಲ್ಲಿ ಬಸ್‌ ಸಂಚರಿಸಲಿದೆ.

ಮಾರಣಕಟ್ಟೆಯಿಂದ ಬೆಳಗ್ಗೆ 8ಕ್ಕೆ ಬಸ್‌ ಹೊರಟು, ವಂಡ್ಸೆ, ನೆಂಪು, ನೇರಳಕಟ್ಟೆ, ಅಂಪಾರು, ಕ್ರೋಢಬೈಲೂರು, ಶಂಕರನಾರಾಯಣ ಆಗಿ ಹಾಲಾಡಿಯವರೆಗೆ ಸಂಚರಿಸಲಿದೆ. ಮಧ್ಯದ ಅವಧಿಯಲ್ಲಿ ಒಂದೆರಡು ಟ್ರಿಪ್‌ ಹಾಗೆಯೇ ಸಂಜೆ ಹಾಲಾಡಿಯಿಂದ ಶಂಕರನಾರಾಯಣ ಮೂಲಕ ಮಾರಣಕಟ್ಟೆಯವರೆಗೆ ಸಂಚರಿಸಲಿದೆ. ಇದರಿಂದ ಕ್ರೋಢ ಬೈಲೂರಿನ ಮಕ್ಕಳು, ಸಾರ್ವಜನಿಕರಿಗೂ ಅನುಕೂಲವಾದಂತಾಗಿದೆ.

ಇಲ್ಲಿಗೆ ಯಾವುದೇ ಬಸ್‌ ಸಂಚಾರವಿರಲಿಲ್ಲ. ಇದರಿಂದ ಶಂಕರ ನಾರಾಯಣ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ 170 ಮಂದಿ ಮಕ್ಕಳು, ಮದರ್‌ ಥೆರೆಸಾ ಶಿಕ್ಷಣ ಸಂಸ್ಥೆಗೆ ತೆರಳುವ 90 ಮಂದಿ ಮಕ್ಕಳು, ಇನ್ನುಳಿದ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಮಕ್ಕಳಿಗೂ ಅನುಕೂಲವಾಗಲಿದೆ. ಕೆಲವರು ನಿಗದಿತ ಸಮಯಕ್ಕೆ ಬಸ್‌ ಇಲ್ಲದೆ ಕುಂದಾಪುರಕ್ಕೆ ಹೋಗಿ ಶಂಕರನಾರಾಯಣಕ್ಕೆ, ಮತ್ತೆ ಕೆಲವರು ಸಿದ್ದಾಪುರಕ್ಕೆ ತೆರಳಿ ಶಂಕರನಾರಾಯಣಕ್ಕೆ ಸುತ್ತು ಬಳಸಿ ಬರುತ್ತಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago