Featured

ಕುಂದಾಪುರ: ಮಾರಣಕಟ್ಟೆ –ಹಾಲಾಡಿ KSRTC ಬಸ್‌ ಸಂಚಾರ ಆರಂಭ ; ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ – Vishwanews24

ಕುಂದಾಪುರ: ಮಾರಣಕಟ್ಟೆ –ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭ  ; ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ

ಕುಂದಾಪುರ: ಮಾರಣಕಟ್ಟೆ ಕಡೆಯಿಂದ ಶಂಕರನಾರಾಯಣ ಕಾಲೇಜಿಗೆ ಹೋಗುವ ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಹು ಬೇಡಿಕೆಯ ಮಾರಣಕಟ್ಟೆ – ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಜ. 14ರಂದು ಆರಂಭ ಗೊಳ್ಳಲಿದೆ. ಇದರಿಂದ ಈ ಭಾಗದ ನೂರಾರು ಮಂದಿ ಶಾಲಾ – ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಮಾರಣಕಟ್ಟೆ ಹಾಗೂ ಸುತ್ತಮುತ್ತಲಿನ ಊರಿನ ನೂರಾರು ವಿದ್ಯಾರ್ಥಿಗಳು ಶಂಕರನಾರಾಯಣ ಕಾಲೇಜಿಗೆ ತೆರಳಲು ಬಸ್‌ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಶಾಸಕ ಸುಕುಮಾರ್‌ ಶೆಟ್ಟರಲ್ಲಿ ಬಸ್‌ಆರಂಭಿಸಲು ಆಗ್ರಹಿಸಿದ್ದರು. ಈ ಕುರಿತಂತೆ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್‌ಆರ್‌ಟಿಸಿ ಡಿಸಿ, ಪ್ರಾದೇಶಿಕ ಸಾರಿಗೆ ಆಯುಕ್ತ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತುರ್ತಾಗಿ ಬಸ್‌ ಆರಂಭಿಸಲು ಸೂಚಿಸಿದರು. ಅದರಂತೆ ಜ. 14ರಿಂದ ಮಾರಣಕಟ್ಟೆ- ಶಂಕರ ನಾರಾಯಣ – ಹಾಲಾಡಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭಗೊಳ್ಳಲಿದ್ದು ದಿನ ಗಳಲ್ಲಿ 4 ಟ್ರಿಪ್‌ ಗಳಲ್ಲಿ ಬಸ್‌ ಸಂಚರಿಸಲಿದೆ.

ಮಾರಣಕಟ್ಟೆಯಿಂದ ಬೆಳಗ್ಗೆ 8ಕ್ಕೆ ಬಸ್‌ ಹೊರಟು, ವಂಡ್ಸೆ, ನೆಂಪು, ನೇರಳಕಟ್ಟೆ, ಅಂಪಾರು, ಕ್ರೋಢಬೈಲೂರು, ಶಂಕರನಾರಾಯಣ ಆಗಿ ಹಾಲಾಡಿಯವರೆಗೆ ಸಂಚರಿಸಲಿದೆ. ಮಧ್ಯದ ಅವಧಿಯಲ್ಲಿ ಒಂದೆರಡು ಟ್ರಿಪ್‌ ಹಾಗೆಯೇ ಸಂಜೆ ಹಾಲಾಡಿಯಿಂದ ಶಂಕರನಾರಾಯಣ ಮೂಲಕ ಮಾರಣಕಟ್ಟೆಯವರೆಗೆ ಸಂಚರಿಸಲಿದೆ. ಇದರಿಂದ ಕ್ರೋಢ ಬೈಲೂರಿನ ಮಕ್ಕಳು, ಸಾರ್ವಜನಿಕರಿಗೂ ಅನುಕೂಲವಾದಂತಾಗಿದೆ.

ಇಲ್ಲಿಗೆ ಯಾವುದೇ ಬಸ್‌ ಸಂಚಾರವಿರಲಿಲ್ಲ. ಇದರಿಂದ ಶಂಕರ ನಾರಾಯಣ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ 170 ಮಂದಿ ಮಕ್ಕಳು, ಮದರ್‌ ಥೆರೆಸಾ ಶಿಕ್ಷಣ ಸಂಸ್ಥೆಗೆ ತೆರಳುವ 90 ಮಂದಿ ಮಕ್ಕಳು, ಇನ್ನುಳಿದ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಮಕ್ಕಳಿಗೂ ಅನುಕೂಲವಾಗಲಿದೆ. ಕೆಲವರು ನಿಗದಿತ ಸಮಯಕ್ಕೆ ಬಸ್‌ ಇಲ್ಲದೆ ಕುಂದಾಪುರಕ್ಕೆ ಹೋಗಿ ಶಂಕರನಾರಾಯಣಕ್ಕೆ, ಮತ್ತೆ ಕೆಲವರು ಸಿದ್ದಾಪುರಕ್ಕೆ ತೆರಳಿ ಶಂಕರನಾರಾಯಣಕ್ಕೆ ಸುತ್ತು ಬಳಸಿ ಬರುತ್ತಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago