ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

Featured, ಉಡುಪಿ

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

ಕುಂದಾಪುರ: ಮೊಬೈಲ್ ಯಾಪ್ ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಲ್ಲಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.

ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24

ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಡೆತ್ ನೋಟ್ :
“ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್‌ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ‌ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು‌ ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ‌ ನಂಬರ್ ಇದೆ. ಕಾಲ್‌ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ” ಎಂದು ಎಟಿಎಂ ಪಾಸ್ವರ್ಡ್ ಬರೆದಿದ್ದಾರೆ.

ಕುಂದಾಪುರ : ಪ್ರೇಯಸಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ – VIshwanews24

Leave a Reply