ಕುಂದಾಪುರ: ಮೊಬೈಲ್ ಯಾಪ್ ನಲ್ಲಿ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿ ಉದ್ಯೋಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಇಲ್ಲಿನ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.
ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಹಾಗೂ ಕನಕ ಎಂಬವರ ಪುತ್ರ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಬುಧವಾರ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಬೇಗನೇ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಷ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಡೆತ್ ನೋಟ್ :
“ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಯಾಪ್ನಲ್ಲಿ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ ನಂಬರ್ ಇದೆ. ಕಾಲ್ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ” ಎಂದು ಎಟಿಎಂ ಪಾಸ್ವರ್ಡ್ ಬರೆದಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…