ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್ ಕೆ ಮುನಿಯಪ್ಪ ಹೇಳಿದ್ದಾರೆ.
ಭಾನುವಾರ ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿ ಎಂಬಲ್ಲಿ 14 ಕೊರಗ ಕುಟುಂಬಗಳಿಗೆ ಹೆಗ್ಗುಂಜೆಬರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಟ್ಟಿಸಿಕೊಡಲಾದ ಮನೆಗಳ ಲೋಕಾರ್ಪಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರಗಳು 5 ಗೈಡ್ ಲೈನ್ಸ್ ಅಳವಡಿಸಿದ್ದು ಅದರಂತೆ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯುತ್ತಿದೆ. ಗೈಡ್ ಲೈನ್ಸ್ ಗಳ ಪ್ರಕಾರ ಆದಾಯ ತೆರಿಗೆ ಪಾವತಿಸುವವರ ಮತ್ತು ಕಾರು ಹಾಗೂ ಐಷಾರಾಮಿ ಜೀವನ ನಡೆಸುವವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಅದು ಎಪಿಎಲ್ ಕಾರ್ಡ್ ಆಗಿ ವರ್ಗಾವಣೆಯಾಗುತ್ತದೆ ಆದರೆ ರಾಜ್ಯದಲ್ಲಿ ಯಾವ ಪಡಿತರ ಚೀಟಿಯು ರದ್ದಾಗುವುದಿಲ್ಲ ಎಂದು ಭರವಸೆ ನೀಡಿದರು.
ಸಾಮಾನ್ಯವಾಗಿ ಸಾಲ ಪಡೆಯಬೇಕಾದರೆ ಬ್ಯಾಂಕಿನವರು ಆದಾಯ ತೆರಿಗೆ ಪಾವತಿ ಪ್ರಮಾಣ ಪತ್ರವನ್ನು ಕೇಳುತ್ತಾರೆ ಎಂದು ಮಾಧ್ಯಮ ವರದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ಅಂತಹ ಸಂದರ್ಭದಲ್ಲಿ ಪರಿಷ್ಕರಣೆ ನಡೆಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.
ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ವಿಚಾರದಲ್ಲಿ ಸರ್ಕಾರ ಯಾವುದೇ ಸಮಸ್ಯೆ ಉಂಟುಮಾಡುವುದಿಲ್ಲ ಎಂದ ಅವರು ಅಂತಹ ಸಂದರ್ಭದಲ್ಲಿ ಒಂದು ವಾರದಲ್ಲಿ ಕಾರ್ಡ್ ಮಂಜೂರು ಮಾಡುತ್ತದೆ. ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಬಿಪಿಎಲ್ ಕಾಡಿನ ಶೇಕಡವಾರು ಐವತ್ತರಷ್ಟಿದೆ ಆದರೆ ಕರ್ನಾಟಕದಲ್ಲಿ ಅದರ ಪರಿಮಾಣ 80 ಶೇಕಡ ಇರುವುದರಿಂದ ಪರಿಷ್ಕರಣೆ ಅನಿವಾರ್ಯವಾಗಿದೆ. 2 ಲಕ್ಷದ 95 ಸಾವಿರ ಕಾರ್ಡುಗಳ ಪೈಕಿ 2 ಲಕ್ಷದ 60 ಸಾವಿರ ಬಿಪಿಎಲ್ ಕಾರ್ಡಿನ ಪರಿಷ್ಕರಣೆ ನಡೆಸಿದ್ದು, ಉಳಿದ ಮೂವತ್ತೈದು ಸಾವಿರ ಕಾರ್ಡುಗಳನ್ನು ಶೀಘ್ರವೇ ಪರಿಷ್ಕರಣೆ ನಡೆಸಿ ಬಳಿಕ ಹೊಸ ಕಾರ್ಡುಗಳಿಗೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸರ್ವರೂ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…