Featured

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ; ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ : ಮುನಿಯಪ್ಪ – vishwanews24

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ; ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ : ಮುನಿಯಪ್ಪ

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್ ಕೆ ಮುನಿಯಪ್ಪ ಹೇಳಿದ್ದಾರೆ.

ಭಾನುವಾರ ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿ ಎಂಬಲ್ಲಿ 14 ಕೊರಗ ಕುಟುಂಬಗಳಿಗೆ ಹೆಗ್ಗುಂಜೆಬರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಟ್ಟಿಸಿಕೊಡಲಾದ ಮನೆಗಳ ಲೋಕಾರ್ಪಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರಗಳು 5 ಗೈಡ್ ಲೈನ್ಸ್ ಅಳವಡಿಸಿದ್ದು ಅದರಂತೆ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯುತ್ತಿದೆ. ಗೈಡ್ ಲೈನ್ಸ್ ಗಳ ಪ್ರಕಾರ ಆದಾಯ ತೆರಿಗೆ ಪಾವತಿಸುವವರ ಮತ್ತು ಕಾರು ಹಾಗೂ ಐಷಾರಾಮಿ ಜೀವನ ನಡೆಸುವವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಅದು ಎಪಿಎಲ್ ಕಾರ್ಡ್ ಆಗಿ ವರ್ಗಾವಣೆಯಾಗುತ್ತದೆ ಆದರೆ ರಾಜ್ಯದಲ್ಲಿ ಯಾವ ಪಡಿತರ ಚೀಟಿಯು ರದ್ದಾಗುವುದಿಲ್ಲ ಎಂದು ಭರವಸೆ ನೀಡಿದರು.

ಸಾಮಾನ್ಯವಾಗಿ ಸಾಲ ಪಡೆಯಬೇಕಾದರೆ ಬ್ಯಾಂಕಿನವರು ಆದಾಯ ತೆರಿಗೆ ಪಾವತಿ ಪ್ರಮಾಣ ಪತ್ರವನ್ನು ಕೇಳುತ್ತಾರೆ ಎಂದು ಮಾಧ್ಯಮ ವರದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ಅಂತಹ ಸಂದರ್ಭದಲ್ಲಿ ಪರಿಷ್ಕರಣೆ ನಡೆಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ವಿಚಾರದಲ್ಲಿ ಸರ್ಕಾರ ಯಾವುದೇ ಸಮಸ್ಯೆ ಉಂಟುಮಾಡುವುದಿಲ್ಲ ಎಂದ ಅವರು ಅಂತಹ ಸಂದರ್ಭದಲ್ಲಿ ಒಂದು ವಾರದಲ್ಲಿ ಕಾರ್ಡ್ ಮಂಜೂರು ಮಾಡುತ್ತದೆ. ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಬಿಪಿಎಲ್ ಕಾಡಿನ ಶೇಕಡವಾರು ಐವತ್ತರಷ್ಟಿದೆ ಆದರೆ ಕರ್ನಾಟಕದಲ್ಲಿ ಅದರ ಪರಿಮಾಣ 80 ಶೇಕಡ ಇರುವುದರಿಂದ ಪರಿಷ್ಕರಣೆ ಅನಿವಾರ್ಯವಾಗಿದೆ. 2 ಲಕ್ಷದ 95 ಸಾವಿರ ಕಾರ್ಡುಗಳ ಪೈಕಿ 2 ಲಕ್ಷದ 60 ಸಾವಿರ ಬಿಪಿಎಲ್ ಕಾರ್ಡಿನ ಪರಿಷ್ಕರಣೆ ನಡೆಸಿದ್ದು, ಉಳಿದ ಮೂವತ್ತೈದು ಸಾವಿರ ಕಾರ್ಡುಗಳನ್ನು ಶೀಘ್ರವೇ ಪರಿಷ್ಕರಣೆ ನಡೆಸಿ ಬಳಿಕ ಹೊಸ ಕಾರ್ಡುಗಳಿಗೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸರ್ವರೂ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago