Featured

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ; ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ : ಮುನಿಯಪ್ಪ – vishwanews24

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ; ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ : ಮುನಿಯಪ್ಪ

ಕುಂದಾಪುರ: ಯಾರ ಪಡಿತರ ಚೀಟಿಯೂ ರದ್ದಾಗುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್ ಕೆ ಮುನಿಯಪ್ಪ ಹೇಳಿದ್ದಾರೆ.

ಭಾನುವಾರ ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿ ಎಂಬಲ್ಲಿ 14 ಕೊರಗ ಕುಟುಂಬಗಳಿಗೆ ಹೆಗ್ಗುಂಜೆಬರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಟ್ಟಿಸಿಕೊಡಲಾದ ಮನೆಗಳ ಲೋಕಾರ್ಪಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರಗಳು 5 ಗೈಡ್ ಲೈನ್ಸ್ ಅಳವಡಿಸಿದ್ದು ಅದರಂತೆ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯುತ್ತಿದೆ. ಗೈಡ್ ಲೈನ್ಸ್ ಗಳ ಪ್ರಕಾರ ಆದಾಯ ತೆರಿಗೆ ಪಾವತಿಸುವವರ ಮತ್ತು ಕಾರು ಹಾಗೂ ಐಷಾರಾಮಿ ಜೀವನ ನಡೆಸುವವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಅದು ಎಪಿಎಲ್ ಕಾರ್ಡ್ ಆಗಿ ವರ್ಗಾವಣೆಯಾಗುತ್ತದೆ ಆದರೆ ರಾಜ್ಯದಲ್ಲಿ ಯಾವ ಪಡಿತರ ಚೀಟಿಯು ರದ್ದಾಗುವುದಿಲ್ಲ ಎಂದು ಭರವಸೆ ನೀಡಿದರು.

ಸಾಮಾನ್ಯವಾಗಿ ಸಾಲ ಪಡೆಯಬೇಕಾದರೆ ಬ್ಯಾಂಕಿನವರು ಆದಾಯ ತೆರಿಗೆ ಪಾವತಿ ಪ್ರಮಾಣ ಪತ್ರವನ್ನು ಕೇಳುತ್ತಾರೆ ಎಂದು ಮಾಧ್ಯಮ ವರದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ಅಂತಹ ಸಂದರ್ಭದಲ್ಲಿ ಪರಿಷ್ಕರಣೆ ನಡೆಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ವಿಚಾರದಲ್ಲಿ ಸರ್ಕಾರ ಯಾವುದೇ ಸಮಸ್ಯೆ ಉಂಟುಮಾಡುವುದಿಲ್ಲ ಎಂದ ಅವರು ಅಂತಹ ಸಂದರ್ಭದಲ್ಲಿ ಒಂದು ವಾರದಲ್ಲಿ ಕಾರ್ಡ್ ಮಂಜೂರು ಮಾಡುತ್ತದೆ. ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಬಿಪಿಎಲ್ ಕಾಡಿನ ಶೇಕಡವಾರು ಐವತ್ತರಷ್ಟಿದೆ ಆದರೆ ಕರ್ನಾಟಕದಲ್ಲಿ ಅದರ ಪರಿಮಾಣ 80 ಶೇಕಡ ಇರುವುದರಿಂದ ಪರಿಷ್ಕರಣೆ ಅನಿವಾರ್ಯವಾಗಿದೆ. 2 ಲಕ್ಷದ 95 ಸಾವಿರ ಕಾರ್ಡುಗಳ ಪೈಕಿ 2 ಲಕ್ಷದ 60 ಸಾವಿರ ಬಿಪಿಎಲ್ ಕಾರ್ಡಿನ ಪರಿಷ್ಕರಣೆ ನಡೆಸಿದ್ದು, ಉಳಿದ ಮೂವತ್ತೈದು ಸಾವಿರ ಕಾರ್ಡುಗಳನ್ನು ಶೀಘ್ರವೇ ಪರಿಷ್ಕರಣೆ ನಡೆಸಿ ಬಳಿಕ ಹೊಸ ಕಾರ್ಡುಗಳಿಗೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸರ್ವರೂ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago