Featured

ಕುಂದಾಪುರ : ಯಾವುದೇ ಪಕ್ಷದವರು ಯಾವುದೇ ಜಾತಿಯವರು ಆಗಿದ್ದರು ಕೂಡ ಮನೆಯಲ್ಲೊಂದು ಭಗವಧ್ವಜ ಇರಲಿ, ಹೆಗಲ ಮೇಲೆ ಕೇಸರಿ ಶಾಲಿರಲಿ.. : ವಾಗ್ಮಿ ಚೈತ್ರಾ ಕುಂದಾಪುರ – Vishwanews24

ಧರ್ಮರಕ್ಷಣೆಗಾಗಿ ಪ್ರಾಣ ಕೊಟ್ಟ ಪ್ರತಿ ಹಿಂದೂ ಕಾರ್ಯಕರ್ತರ ಬದಲಿಗೆ ಸಾವಿರಾರು ಕಾರ್ಯಕರ್ತರು ಹುಟ್ಟಿಕೊಂಡಿದ್ದಾರೆ..

ನಾವು ಜೈ ಶ್ರೀರಾಮ್ ಹೇಳುವ ಬಾಯಲ್ಲಿಯೇ ಜೈ ಭೀಮ್ ಎಂದು ಗರ್ವದಿಂದ ಹೇಳುತ್ತೇವೆ..

ಜಾತಿ ಹೆಸರಲ್ಲಿ ಹಿಂದೂ ಸಮಾಜವನ್ನು ವಿಭಜಿಸಲು ಆಗಲ್ಲ..

ಕುಂದಾಪುರ : ಧರ್ಮರಕ್ಷಣೆಗಾಗಿ ಪ್ರಾಣ ಕೊಟ್ಟ ಪ್ರತಿ ಹಿಂದೂ ಕಾರ್ಯಕರ್ತರ ಬದಲಿಗೆ ಸಾವಿರಾರು ಕಾರ್ಯಕರ್ತರು ಹುಟ್ಟಿಕೊಂಡಿದ್ದಾರೆ. ಕೈಯಲ್ಲಿರುವ ಪಂಜು ಆರಿದರೂ ಹೃದಯದಲ್ಲಿನ ಕಿಚ್ಚು ಆರುವುದಿಲ್ಲ. ಹಿಂದುತ್ವಕ್ಕಾಗಿ ನಡೆದ ಬಲಿದಾನ ವ್ಯರ್ಥವಾಗಲ್ಲ. ನಮ್ಮನ್ನು ಜೈ ಭೀಮ್ ಹೆಸರಿನಲ್ಲಿ ಒಡೆಯಲು ಸಾಧ್ಯವಿಲ್ಲ. ನಾವು ಜೈ ಶ್ರೀರಾಮ್ ಹೇಳುವ ಬಾಯಲ್ಲಿಯೇ ಜೈ ಭೀಮ್ ಎಂದು ಗರ್ವದಿಂದ ಹೇಳುತ್ತೇವೆ. ನಮಗೆ ರಾಮ, ಭೀಮರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ರಾಮನು ನಮ್ಮವನೆ ಭೀಮನು ನಮ್ಮವನೆ ಎಂಬ ಕಲ್ಪನೆಯನ್ನು ಸಮಾಜಕ್ಕೆ ತಿಳಿಸಿದ್ದೇವೆ. ಜಾತಿ ಹೆಸರಲ್ಲಿ ಹಿಂದೂ ಸಮಾಜವನ್ನು ವಿಭಜಿಸಲು ಆಗಲ್ಲ ಎಂದು ವಾಗ್ಮಿ ಚೈತ್ರಾ ಕುಂದಾಪುರ ಹೇಳಿದರು.

ಭಜರಂಗದಳ ಕಾರ್ಯಕರ್ತ ಹರ್ಷ ಹಿಂದೂ ಹತ್ಯೆ ಖಂಡಿಸಿ, ಮತ್ತು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಹಿಂದೂ ಬಳಗ ನಾವುಂದ, ಮರವಂತೆ, ಕಿರಿಮಂಜೇಶ್ವರ, ನಾಡ ವಲಯದ ವತಿಯಿಂದ ಬೈಂದೂರು ತಾಲೂಕಿನ ಮರವಂತೆ ಶ್ರೀ ರಾಮಮಂದಿರ ಮರವಂತೆಯಿಂದ ಅರೆಹೊಳೆ ಕ್ರಾಸ್ ನಂದಿಕೇಶ್ವರ ದೇವಸ್ಥಾನದವರೆಗೆ ಬೃಹತ್ ಪಂಜಿನ ಮೆರವಣಿಗೆ ಜರುಗಿದ್ದು ಬಳಿಕ ನಡೆದ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

ನಾವು ಆರಾಧಿಸುವ ದೇವದೇವತೆಗಳ ಕೈಯಲ್ಲಿ ಶಸ್ತ್ರವಿದೆ. ಧರ್ಮದ ರಕ್ಷಣೆಗೆ ಶಾಸ್ತ್ರ ಓದುವ ಜೊತೆಗೆ ಶಸ್ತ್ರ ಹಿಡಿಯುವ ಅನಿವಾರ್ಯತೆಯಿದೆ. ಕೆಲವರ ಸಾವುಗಳು ಇನ್ನು ಸಾವಿರ ಮಂದಿ ಹುಟ್ಟಲು ಕಾರಣವಾಗುತ್ತದೆ. ಹಿಂದೂ ಸಮಾಜ ನಾಶ ಮಾಡಲು ಜಿಹಾದಿಗಳು ಮುಂದಾಗಿದ್ದಾರೆ. ಹೆದರಿಸುವ ಮಂದಿಗೆ ತಕ್ಕ ಉತ್ತರ ಕೊಡಲು ಸಿದ್ಧರಾಗಬೇಕು. ಯಾವುದೇ ಪಕ್ಷದವರು ಯಾವುದೇ ಜಾತಿಯವರು ಆಗಿದ್ದರು ಕೂಡ ಮನೆಯಲ್ಲೊಂದು ಭಗವಧ್ವಜ ಇರಲಿ. ಹೆಗಲ ಮೇಲೆ ಕೇಸರಿ ಶಾಲಿರಲಿ. ಇದರಿಂದ ಧರ್ಮ ರಕ್ಷಣೆ ಸಾಧ್ಯ ಎಂದು ಅವರು ಕರೆಕೊಟ್ಟರು.

ನಿವೃತ್ತ ಶಿಕ್ಷಕ ಸುಬ್ಬಣ್ಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮರವಂತೆ ರಾಮಮಂದಿರದಲ್ಲಿ ವಾಸು ಖಾರ್ವಿ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ನಿತ್ಯಾನಂದ ಉಪ್ಪುಂದ, ಅಕ್ಷಯ್ ತೆಗ್ಗರ್ಸೆ ಪ್ರಾರ್ಥಿಸಿದರು.

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

4 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

5 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

5 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

7 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

8 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

8 hours ago