Featured

ಕುಂದಾಪುರ: ಯುವಕನ ದೇಹ ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆ – Vishwanews24

ಕುಂದಾಪುರ: ಯುವಕನ ದೇಹ ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ : ದೃಢಕಾಯದ ಯುವಕನೊಬ್ಬನ ದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದ್ದು, ಗಿಡಗಂಟಿಗಳ ಮಧ್ಯೆ ಕೊಳೆತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಕೊಳೆತ ಸ್ಥಿತಿಯಲ್ಲಿದ್ದ ಶವ ಹೊರತೆಗೆಯಲು ಹಾಗೂ ಸಾಗಿಸಲು 24×7 ಇಬ್ರಾಹಿಂ ಗಂಗೊಳ್ಳಿ, ಕೃಷ್ಣ (ಕಿಟ್ಟ), ಸ್ವಯಂಸೇವಕ ನದೀಮ್ ಹಾಗೂ ಸಫ್ವಾನ್, ಗಂಗೊಳ್ಳಿ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಚಂದ್ರಶೇಕರ್ ಸಹಕರಿಸಿದರು.

ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago