ಕುಂದಾಪುರ : ದೃಢಕಾಯದ ಯುವಕನೊಬ್ಬನ ದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದ್ದು, ಗಿಡಗಂಟಿಗಳ ಮಧ್ಯೆ ಕೊಳೆತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಕೊಳೆತ ಸ್ಥಿತಿಯಲ್ಲಿದ್ದ ಶವ ಹೊರತೆಗೆಯಲು ಹಾಗೂ ಸಾಗಿಸಲು 24×7 ಇಬ್ರಾಹಿಂ ಗಂಗೊಳ್ಳಿ, ಕೃಷ್ಣ (ಕಿಟ್ಟ), ಸ್ವಯಂಸೇವಕ ನದೀಮ್ ಹಾಗೂ ಸಫ್ವಾನ್, ಗಂಗೊಳ್ಳಿ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಚಂದ್ರಶೇಕರ್ ಸಹಕರಿಸಿದರು.
ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…