Featured

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

ಕುಂದಾಪುರ: ಕನ್ನಡಿಗ ವರ್ಲ್ಡ್ ಹಾಗೂ ಮುಕ್ತ ಚಾನೆಲ್ನ ಕುಂದಾಪುರ ವರದಿಗಾರ, ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ‘ಭೀಮ ರತ್ನ’ ಪ್ರಶಸ್ತಿ ದೊರಕಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ರಾಜ್ಯ ಸಮಿತಿ ಬೆಂಗಳೂರು ಇವರು ಗಣರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕುಂದಾಪುರದ ಕಲಾ ಮಂದಿರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು ಭೀಮ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ಬೆಂಗಳೂರು ನಗರ ಸಾಮಾಜಿಕ ದಲಿತ ಹೋರಾಟಗಾರ ಜಿ.ಎ.ನಾಗಪ್ಪ, ಪಡುಕೋಣೆ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಪ್ಪ ಶೆಟ್ಟಿ, ಸಾಮಾಜಿಕ ಹೋರಾಟಗಾರರಾದ ಪ್ರಭಾಕರ ಮೂಡುಬಿದಿರೆ, ನಜೀರ್ ಬೆಳ್ವಾಯಿ ಅವರಿಗೆ ಭೀಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪತ್ರಕರ್ತ ಯೋಗೀಶ್ ಕುಂಭಾಶಿಯವರು ಕುಂದಾಪುರ ಭಾಗದಲ್ಲಿನ ಬಡವರ, ಸಾಮಾನ್ಯ ಜನರ ಸಮಸ್ಯೆಗಳನ್ನು ತಮ್ಮ ವಾಹಿನಿಯಲ್ಲಿ ಬೆಳಕು ಚೆಲ್ಲುವ ಮೂಲಕ ಒಂದಷ್ಟು ಬಡ ಕುಟುಂಬಗಳ ಸಮಸ್ಯೆಗೆ ಮುಕ್ತಿ ಕೊಡಿಸಿದ್ದಾರೆ. ಹೀಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು  ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago