ಕುಂದಾಪುರ : ಬಸವ ವಸತಿ ಯೋಜನೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಬಂಧಿತ ಆರೋಪಿ. ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು ಪಿಡಿಓ 10ಸಾವಿರ ರೂ. ಖರ್ಚಾಗಿದ್ದು, ಆ ಹಣವನ್ನು ವಾಸಾಸ್ಸು ನೀಡುವಂತೆ ಲಂಚ ಬೇಡಿಕೆಯನ್ನು ಪಿಡಿಓ ಇಟ್ಟಿದ್ದರು.
ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್ನ ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಎಂ. ಹಾಗೂ ಸಿಬ್ಬಂದಿ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ್, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಈ ಕಾರ್ಯಾಚರಣೆ ನಡೆಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…