ಕುಂದಾಪುರ : ಬಸವ ವಸತಿ ಯೋಜನೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಬಂಧಿತ ಆರೋಪಿ. ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು ಪಿಡಿಓ 10ಸಾವಿರ ರೂ. ಖರ್ಚಾಗಿದ್ದು, ಆ ಹಣವನ್ನು ವಾಸಾಸ್ಸು ನೀಡುವಂತೆ ಲಂಚ ಬೇಡಿಕೆಯನ್ನು ಪಿಡಿಓ ಇಟ್ಟಿದ್ದರು.
ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್ನ ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಎಂ. ಹಾಗೂ ಸಿಬ್ಬಂದಿ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ್, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…