ಕುಂದಾಪುರ: ಉಡುಪಿ ಜಿಲ್ಲೆಯ ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ಸಂಭವಿಸಿದೆ.
ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೃತಪಟ್ಟಿರುತ್ತಾರೆ ಎಂದು ತಿಳಿದುಬಂದಿದೆ.
ಬೈಕ್ ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕುಂಭಾಶಿ ಪಾಕಶಾಲೆ ಸಮೀಪದಿಂದ ಬಂದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಅದೇ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸರಣಿ ಅಪಘಾತಗೊಂಡಿದೆ.
ಈ ಅಪಘಾತದಲ್ಲಿ ಬೈಕು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಸಹ ಜಖಂ ಗೊಂಡಿದೆ. ಅಲ್ಲದೆ ಬಸ್ಸಿನ ಮುಂಭಾಗಕ್ಕೂ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…