Featured

ಕುಂದಾಪುರ : ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24

ಕುಂದಾಪುರ : ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24

ಕುಂದಾಪುರ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 13 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ 12 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರನ್ನು ಹೊಂದಿದೆ. ಎರಡು ಸಂಸದರಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿಯೂ ಸಾಕಷ್ಟು ಸಂಖ್ಯೆಯ ಪಕ್ಷದ ಹಾಗೂ ಪಕ್ಷದ ಬೆಂಬಲಿತ ಸದಸ್ಯರು ಇರುವುದರಿಂದ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಿಚ್ಚಳವಾಗಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದ್ದಾರೆ.

ಇಲ್ಲಿಗೆ ಸಮೀಪದ ಹೆಮ್ಮಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪಕ್ಷದ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಪಕ್ಷದ ಹಾಗೂ ಪಕ್ಷದ ಪ್ರಮುಖರು ತೆಗೆದುಕೊಳ್ಳುತ್ತಾರೆ. ಸ್ವಾಭಾವಿಕವಾಗಿ ಹಂಸಲೇಖ ಒಬ್ಬ ಕಲಾವಿದರು. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಯಾರಾದರೂ ಸಾಧು-ಸಂತರು, ಅಶ್ಪಶ್ರ್ಯತೆ ನಿವಾರಣೆಗಾಗಿ, ಅಸ್ಪಶ್ರ್ಯತೆ ಇರುವ ಕೇರಿಗಳಲ್ಲಿ ಸಂಚಾರ ಮಾಡಿ, ಅವರಿಗೆ ಕೈ ಮುಟ್ಟಿ ಪ್ರಸಾದವನ್ನು ನೀಡಿ, ಹಿಂದೂ ಧರ್ಮ ಒಂದು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿದವರು, ಹಿರಿಯ ಪೇಜಾವರ ಶ್ರೀಗಳು, ಅವರ ಬಗ್ಗೆ ಹಂಸಲೇಖ ಲಘುವಾಗಿ ಮಾತನಾಡಿದ್ದು, ಅವರ ಭಕ್ತಾಧಿಗಳಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ನೋವಾಗಿದೆ. ಅವರು ಈ ಕುರಿತು ಕ್ಷಮೆ ಕೇಳಿರುವುದು ನನಗೆ ಗೊತ್ತಿಲ್ಲ, ಆದರೆ ಹಂಸಲೇಖ ಅವರು ಸ್ವಾಮೀಜಿಯವರ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ಸಚಿವ ಕೋಟ ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಹೆಗ್ಡೆ ತಗ್ಗರ್ಸೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಸದಾನಂದ ಉಪ್ಪಿನಕುದ್ರು, ಕರಣ್ ಪೂಜಾರಿ ತಲ್ಲೂರ್ ಇದ್ದರು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

6 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

6 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

8 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

9 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

9 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

9 hours ago