ಕುಂದಾಪುರ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 13 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ 12 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರನ್ನು ಹೊಂದಿದೆ. ಎರಡು ಸಂಸದರಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿಯೂ ಸಾಕಷ್ಟು ಸಂಖ್ಯೆಯ ಪಕ್ಷದ ಹಾಗೂ ಪಕ್ಷದ ಬೆಂಬಲಿತ ಸದಸ್ಯರು ಇರುವುದರಿಂದ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಿಚ್ಚಳವಾಗಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದ್ದಾರೆ.
ಇಲ್ಲಿಗೆ ಸಮೀಪದ ಹೆಮ್ಮಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಪಕ್ಷದ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಪಕ್ಷದ ಹಾಗೂ ಪಕ್ಷದ ಪ್ರಮುಖರು ತೆಗೆದುಕೊಳ್ಳುತ್ತಾರೆ. ಸ್ವಾಭಾವಿಕವಾಗಿ ಹಂಸಲೇಖ ಒಬ್ಬ ಕಲಾವಿದರು. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಯಾರಾದರೂ ಸಾಧು-ಸಂತರು, ಅಶ್ಪಶ್ರ್ಯತೆ ನಿವಾರಣೆಗಾಗಿ, ಅಸ್ಪಶ್ರ್ಯತೆ ಇರುವ ಕೇರಿಗಳಲ್ಲಿ ಸಂಚಾರ ಮಾಡಿ, ಅವರಿಗೆ ಕೈ ಮುಟ್ಟಿ ಪ್ರಸಾದವನ್ನು ನೀಡಿ, ಹಿಂದೂ ಧರ್ಮ ಒಂದು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿದವರು, ಹಿರಿಯ ಪೇಜಾವರ ಶ್ರೀಗಳು, ಅವರ ಬಗ್ಗೆ ಹಂಸಲೇಖ ಲಘುವಾಗಿ ಮಾತನಾಡಿದ್ದು, ಅವರ ಭಕ್ತಾಧಿಗಳಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ನೋವಾಗಿದೆ. ಅವರು ಈ ಕುರಿತು ಕ್ಷಮೆ ಕೇಳಿರುವುದು ನನಗೆ ಗೊತ್ತಿಲ್ಲ, ಆದರೆ ಹಂಸಲೇಖ ಅವರು ಸ್ವಾಮೀಜಿಯವರ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ಸಚಿವ ಕೋಟ ಆಕ್ಷೇಪ ವ್ಯಕ್ತಪಡಿಸಿದರು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ಕುಮಾರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಹೆಗ್ಡೆ ತಗ್ಗರ್ಸೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಸದಾನಂದ ಉಪ್ಪಿನಕುದ್ರು, ಕರಣ್ ಪೂಜಾರಿ ತಲ್ಲೂರ್ ಇದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…