Featured

ಕುಂದಾಪುರ: ವಿಧಾನ ಪರಿಷತ್ ಚುನಾವಣೆ : ಬಹುಮತದೊಂದಿಗೆ ಆಯ್ಕೆಯಾಗುವ ವಿಶ್ವಾಸವಿದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಕುಂದಾಪುರ: ವಿಧಾನ ಪರಿಷತ್ ಚುನಾವಣೆ : ಬಹುಮತದೊಂದಿಗೆ ಆಯ್ಕೆಯಾಗುವ ವಿಶ್ವಾಸವಿದೆ ..

ಬಿಜೆಪಿಗೆ 3500 ಕ್ಕೂ ಅಧಿಕ ಮತವಿದ್ದು ಎಲ್ಲಾ ಮತ ನಮಗೆ ಸಿಗಲಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ.. : ಕೋಟ ಶ್ರೀನಿವಾಸ ಪೂಜಾರಿ – Vishwanews24

ಕುಂದಾಪುರ:  ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ ಹಾಗೂ ಉಡುಪಿ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು ಮತದಾನ ಪೂರ್ವ ಬಿಜೆಪಿ ಮುಖಂಡ ರಾಜೇಶ್ ಉಡುಪ ಅವರ ಕೋಟೇಶ್ವರದ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಆಗಮಿಸಿದ ಅವರು ಕೋಟೇಶ್ವರ ಗ್ರಾಮಪಂಚಾಯತ್’ನಲ್ಲಿ ಬಿಜೆಪಿ‌ ಬೆಂಬಲಿಸುವ 22 ಮತದಾರರನ್ನು ಭೇಟಿ ಮಾಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಕಾರ್ಯಕರ್ತರು, ಪಕ್ಷವನ್ನು ಬೆಂಬಲಿಸುವ ಪಕ್ಷೇತರರು, ಇತರ ಪಕ್ಷದ ಸದಸ್ಯರ ಕೂಡ ಬೆಂಬಲಿಸುವ ನಿರೀಕ್ಷೆಯಿದ್ದು ಬಹುಮತದೊಂದಿಗೆ ಆಯ್ಕೆಯಾಗುವ ವಿಶ್ವಾಸವಿದೆ. ಬಿಜೆಪಿಗೆ 3500 ಕ್ಕೂ ಅಧಿಕ ಮತವಿದ್ದು ಎಲ್ಲಾ ಮತ ನಮಗೆ ಸಿಗಲಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಪಂಚಾಯತ್ ದಿನಾಚರಣೆಯನ್ನು ಆಚರಿಸುವ ಚಿಂತನೆಯಿದ್ದರೂ ಕೂಡ ಕೋವಿಡ್ ಕಾರಣಕ್ಕಾಗಿ ಎರಡು ವರ್ಷದಿಂದ ಆಗಿರಲಿಲ್ಲ. ಆದರೆ ಪಂಚಾಯತ್ ಸಬಲೀಕರಣಕ್ಕಾಗಿ ಗ್ರಾ.ಪಂ ಸದಸ್ಯರ ಗೌರವ, ಗೌರವ ಧನವನ್ನು ಹೆಚ್ಚಿಸಲು, ಗ್ರಾಮಪಂಚಾಯತ್ ಗೆ ಸಂಬಂಧಿಸಿದ ಆಡಳಿತಾತ್ಮಕ‌ ನಿರ್ಧಾರಗಳನ್ನು‌ ಕೈಗೊಳ್ಳಲು ಬೇಕಾದ ಕ್ರಮಕೈಗೊಳ್ಳಲಾಗುತ್ತದೆ. ಜನನ ಮರಣ ದೃಢೀಕರಣ ಪತ್ರ, ಸಂಧ್ಯಾಸುರಕ್ಷಾ, ಮನಸ್ವಿನಿ, ಅಂಗವಿಕಲ, ವೃದ್ಧಾಫ್ಯ ವೇತನ ಮೊದಲಾದವುಗಳನ್ನು ಗ್ರಾಮಪಂಚಾಯತಿಯಲ್ಲೇ ಮಾಡಲು ವ್ಯವಸ್ಥೆ ಅನುಷ್ಟಾನಗೊಳಸಲು ಸಾಧಕ ಬಾಧಕ ಪರಾಮರ್ಷಿಸಿ ಸರಕಾರದ ಗಮನಕ್ಕೆ ತರುವ ಅನಿವಾರ್ಯತೆಯಿದೆ. ಸಿಬ್ಬಂದಿಗಳ ದರ್ಜೆಗಳ ಬಗ್ಗೆಯೂ ಜಿಜ್ಞಾಸೆಯಿದ್ದು ಮುಂದಿನ ದಿನಗಳಲ್ಲಿ ಗ್ರಾ.ಪಂ ಸರಕಾರದಂತೆ ಕಾರ್ಯ ನಿರ್ವಹಿಸುವಂತೆ ಮಾಡುವ ಇರಾದೆಯಿದೆ ಎಂದರು.

ಈ ಸಂದರ್ಭ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸತೀಶ್ ಪೂಜಾರಿ ವಕ್ವಾಡಿ, ಕೋಟೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ, ಉಪಾಧ್ಯಕ್ಷೆ ರಾಗಿಣಿ, ಮಾಜಿ ಅಧ್ಯಕ್ಷ ಉದಯ ನಾಯಕ್, ಮುಖಂಡ ನಾಗರಾಜ ಆಚಾರ್ ಕೋಣಿ ಮೊದಲಾದವರಿದ್ದರು.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

1 day ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

1 day ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

1 day ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

1 day ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

1 day ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago