ಕುಂದಾಪುರ: ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ ಹಾಗೂ ಉಡುಪಿ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು ಮತದಾನ ಪೂರ್ವ ಬಿಜೆಪಿ ಮುಖಂಡ ರಾಜೇಶ್ ಉಡುಪ ಅವರ ಕೋಟೇಶ್ವರದ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಆಗಮಿಸಿದ ಅವರು ಕೋಟೇಶ್ವರ ಗ್ರಾಮಪಂಚಾಯತ್’ನಲ್ಲಿ ಬಿಜೆಪಿ ಬೆಂಬಲಿಸುವ 22 ಮತದಾರರನ್ನು ಭೇಟಿ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಕಾರ್ಯಕರ್ತರು, ಪಕ್ಷವನ್ನು ಬೆಂಬಲಿಸುವ ಪಕ್ಷೇತರರು, ಇತರ ಪಕ್ಷದ ಸದಸ್ಯರ ಕೂಡ ಬೆಂಬಲಿಸುವ ನಿರೀಕ್ಷೆಯಿದ್ದು ಬಹುಮತದೊಂದಿಗೆ ಆಯ್ಕೆಯಾಗುವ ವಿಶ್ವಾಸವಿದೆ. ಬಿಜೆಪಿಗೆ 3500 ಕ್ಕೂ ಅಧಿಕ ಮತವಿದ್ದು ಎಲ್ಲಾ ಮತ ನಮಗೆ ಸಿಗಲಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಪಂಚಾಯತ್ ದಿನಾಚರಣೆಯನ್ನು ಆಚರಿಸುವ ಚಿಂತನೆಯಿದ್ದರೂ ಕೂಡ ಕೋವಿಡ್ ಕಾರಣಕ್ಕಾಗಿ ಎರಡು ವರ್ಷದಿಂದ ಆಗಿರಲಿಲ್ಲ. ಆದರೆ ಪಂಚಾಯತ್ ಸಬಲೀಕರಣಕ್ಕಾಗಿ ಗ್ರಾ.ಪಂ ಸದಸ್ಯರ ಗೌರವ, ಗೌರವ ಧನವನ್ನು ಹೆಚ್ಚಿಸಲು, ಗ್ರಾಮಪಂಚಾಯತ್ ಗೆ ಸಂಬಂಧಿಸಿದ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲು ಬೇಕಾದ ಕ್ರಮಕೈಗೊಳ್ಳಲಾಗುತ್ತದೆ. ಜನನ ಮರಣ ದೃಢೀಕರಣ ಪತ್ರ, ಸಂಧ್ಯಾಸುರಕ್ಷಾ, ಮನಸ್ವಿನಿ, ಅಂಗವಿಕಲ, ವೃದ್ಧಾಫ್ಯ ವೇತನ ಮೊದಲಾದವುಗಳನ್ನು ಗ್ರಾಮಪಂಚಾಯತಿಯಲ್ಲೇ ಮಾಡಲು ವ್ಯವಸ್ಥೆ ಅನುಷ್ಟಾನಗೊಳಸಲು ಸಾಧಕ ಬಾಧಕ ಪರಾಮರ್ಷಿಸಿ ಸರಕಾರದ ಗಮನಕ್ಕೆ ತರುವ ಅನಿವಾರ್ಯತೆಯಿದೆ. ಸಿಬ್ಬಂದಿಗಳ ದರ್ಜೆಗಳ ಬಗ್ಗೆಯೂ ಜಿಜ್ಞಾಸೆಯಿದ್ದು ಮುಂದಿನ ದಿನಗಳಲ್ಲಿ ಗ್ರಾ.ಪಂ ಸರಕಾರದಂತೆ ಕಾರ್ಯ ನಿರ್ವಹಿಸುವಂತೆ ಮಾಡುವ ಇರಾದೆಯಿದೆ ಎಂದರು.
ಈ ಸಂದರ್ಭ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸತೀಶ್ ಪೂಜಾರಿ ವಕ್ವಾಡಿ, ಕೋಟೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ, ಉಪಾಧ್ಯಕ್ಷೆ ರಾಗಿಣಿ, ಮಾಜಿ ಅಧ್ಯಕ್ಷ ಉದಯ ನಾಯಕ್, ಮುಖಂಡ ನಾಗರಾಜ ಆಚಾರ್ ಕೋಣಿ ಮೊದಲಾದವರಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…