ಉಡುಪಿ : ಕುಂದಾಪುರ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಬಾಲಕನನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ತಿಂಗಳು ಕುಂದಾಪುರ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿ ಅನುಪ್ ಎನ್ನುವ ಬಾಲಕನಿಗೆ ಪ್ರೇಯಸಿಯ ವಿಚಾರವಾಗಿ ಅದೆ ಕಾಲೇಜಿನ ಹಳೆ ವಿದ್ಯಾರ್ಥಿ ಮತ್ತು ನಾಲ್ವರು ಸೇರಿ ಸ್ಕೇಚ್ ಹಾಕಿ ಕಾಲೇಜಿನ ಆವರಣದಲ್ಲಿ ಚೂರಿ ಇರಿದಿದ್ದರು. ಘಟನೆಯ ಬಳಿಕ ಪೊಲೀಸ್ರು ಚೂರಿ ಇರಿತ ಬಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿರುವುದು ತಿಳಿದು ತನ್ನ ಸಂಬಂಧಿಗಳ ಮನೆ ಸೇರಿದ್ದ.
ತನಿಖೆ ನಡೆಸಿದ ಕುಂದಾಪುರ ಎಸ್.ಐ ಹರೀಶ್ ಆರ್ ನಾಯ್ಕ್ ನೇತೃತ್ವದ ತಂಡ ಆತನ ಹುಟ್ಟೂರಿನಿಂದ ಕುಂದಾಪುರಕ್ಕೆ ಕರೆ ತಂದಿದ್ದಾರೆ. ಆರೋಪಿ ಆತನ ಪ್ರಿಯತಮೆ ಹಾಗೂ ಗೆಳೆಯ ಚರ್ಚಿಸಿ ಇರಿಯಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ. ಅನೂಪ್ ಗೆ ಇರಿದ ಬಾಲಕನು ಕೋಡಿಗೆ ಹೀಗಿ ತೆಗ್ಗಟ್ಟೆಗೆ ತೆರಳಿ ಕ್ಲಿನಿಕ್ ನಲಿ ಕೈಗೆ ಆಗಿದ್ದ ಗಾಯಕ್ಕೆ ಚಿಕಿತ್ಸೆ ಪಡೆದಿದ್ದ. ಅಲ್ಲದೆ ಅದೇ ದಿನ ಅಲ್ಲದೆ ಸಂಜೆ ಮತ್ತಿಬ್ಬರೊಂದಿಗೆ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ. ಬಳಿಕ. ಡಿ 2 ರಂದು ರಾಮನಗರ, ಡಿ.3 ರಂದು ಬಾಗಲಕೋಟೆ, ಡಿ. 4 ರಂದು ಹುಟ್ಟೂರಾದ ಕೊಪ್ಪಳಕ್ಕೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ.29 ರಂದು ಬೋರ್ಡ್ ಹೈಸ್ಕೂಲ್ ನ ಅನೂಪ್ ಶೇರಿಗಾರ್ (17) ಎಂಬ ಬಾಲಕನ ಹೊಟ್ಟೆ, ಎದೆ, ಕುತ್ತಿಗೆ ಭುಜ ಕೆನ್ನೆಗೆ ಇರಿದುಕೊಲೆಗೆ ಯತ್ನಿಸಲಾಗಿತ್ತು ಎಂದು ಕೇಸ್ ದಾಖಲಾಗಿತ್ತು.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…