ಉಡುಪಿ : ಕುಂದಾಪುರ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಬಾಲಕನನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ತಿಂಗಳು ಕುಂದಾಪುರ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿ ಅನುಪ್ ಎನ್ನುವ ಬಾಲಕನಿಗೆ ಪ್ರೇಯಸಿಯ ವಿಚಾರವಾಗಿ ಅದೆ ಕಾಲೇಜಿನ ಹಳೆ ವಿದ್ಯಾರ್ಥಿ ಮತ್ತು ನಾಲ್ವರು ಸೇರಿ ಸ್ಕೇಚ್ ಹಾಕಿ ಕಾಲೇಜಿನ ಆವರಣದಲ್ಲಿ ಚೂರಿ ಇರಿದಿದ್ದರು. ಘಟನೆಯ ಬಳಿಕ ಪೊಲೀಸ್ರು ಚೂರಿ ಇರಿತ ಬಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿರುವುದು ತಿಳಿದು ತನ್ನ ಸಂಬಂಧಿಗಳ ಮನೆ ಸೇರಿದ್ದ.
ತನಿಖೆ ನಡೆಸಿದ ಕುಂದಾಪುರ ಎಸ್.ಐ ಹರೀಶ್ ಆರ್ ನಾಯ್ಕ್ ನೇತೃತ್ವದ ತಂಡ ಆತನ ಹುಟ್ಟೂರಿನಿಂದ ಕುಂದಾಪುರಕ್ಕೆ ಕರೆ ತಂದಿದ್ದಾರೆ. ಆರೋಪಿ ಆತನ ಪ್ರಿಯತಮೆ ಹಾಗೂ ಗೆಳೆಯ ಚರ್ಚಿಸಿ ಇರಿಯಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ. ಅನೂಪ್ ಗೆ ಇರಿದ ಬಾಲಕನು ಕೋಡಿಗೆ ಹೀಗಿ ತೆಗ್ಗಟ್ಟೆಗೆ ತೆರಳಿ ಕ್ಲಿನಿಕ್ ನಲಿ ಕೈಗೆ ಆಗಿದ್ದ ಗಾಯಕ್ಕೆ ಚಿಕಿತ್ಸೆ ಪಡೆದಿದ್ದ. ಅಲ್ಲದೆ ಅದೇ ದಿನ ಅಲ್ಲದೆ ಸಂಜೆ ಮತ್ತಿಬ್ಬರೊಂದಿಗೆ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ. ಬಳಿಕ. ಡಿ 2 ರಂದು ರಾಮನಗರ, ಡಿ.3 ರಂದು ಬಾಗಲಕೋಟೆ, ಡಿ. 4 ರಂದು ಹುಟ್ಟೂರಾದ ಕೊಪ್ಪಳಕ್ಕೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ.29 ರಂದು ಬೋರ್ಡ್ ಹೈಸ್ಕೂಲ್ ನ ಅನೂಪ್ ಶೇರಿಗಾರ್ (17) ಎಂಬ ಬಾಲಕನ ಹೊಟ್ಟೆ, ಎದೆ, ಕುತ್ತಿಗೆ ಭುಜ ಕೆನ್ನೆಗೆ ಇರಿದುಕೊಲೆಗೆ ಯತ್ನಿಸಲಾಗಿತ್ತು ಎಂದು ಕೇಸ್ ದಾಖಲಾಗಿತ್ತು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…