ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24

Featured, ಉಡುಪಿ

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ

ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

ಮಂಗಳವಾರ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ ( ಅಲ್ಲಾಹ್‌ ಅಕ್ಬಾರ್‌ ಅಜಾನ್) ಮಾಡಿಸಿದ್ದಾರೆ ಎನ್ನಲಾಗಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು, ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24

ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಕುಂದಾಪುರ ಸರ್ಕಲ್‌ ಇನ್ಸ್‌ ಪೆಕ್ಟರ್‌ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

Leave a Reply