ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
ಮಂಗಳವಾರ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ ( ಅಲ್ಲಾಹ್ ಅಕ್ಬಾರ್ ಅಜಾನ್) ಮಾಡಿಸಿದ್ದಾರೆ ಎನ್ನಲಾಗಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು, ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24
ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.
ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್ಗೆ ನೃತ್ಯ..
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…